1. ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ.
|
2. ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.
|
3. ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;
|
4. ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.
|
6. ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;
|
7. ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು.
|
8. ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.
|
9. ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.
|
10. ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.
|
11. ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ.
|
12. ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.
|
14. ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
|
15. ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
|