2. ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.
|
4. ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
|
5. ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
|
6. ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.
|
8. ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.
|
10. ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
|
14. ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ
|
17. ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.
|
18. ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
|
21. ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
|
22. ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
|
27. ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.
|
29. ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು.
|
32. ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು.
|
35. ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
|