1. ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
|
2. ಆಗ ಆತನು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡನು; ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
|
3. ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
|
4. ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು.
|
5. ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು.
|
7. ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು.
|
8. ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
|
10. ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
|
12. ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು.
|
13. ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು.
|
14. ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
|
15. ಆದರೂ ಆತನ ಕೀರ್ತಿಯು ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು; ದೊಡ್ಡ ಸಮೂಹಗಳು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ಆತನಿಂದ ವಾಸಿಮಾಡಿಸಿಕೊಳ್ಳು ವದಕ್ಕೂ ಕೂಡಿ ಬಂದರು.
|
17. ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
|
18. ಆಗ ಇಗೋ, ಪಾರ್ಶ್ವವಾಯು ರೋಗವಿದ್ದ ಒಬ್ಬ ಮನುಷ್ಯನನ್ನು ಕೆಲವರು ಹಾಸಿಗೆಯಲ್ಲಿ ಹೊತ್ತು ಕೊಂಡು ಬಂದು ಅವನನ್ನು ಒಳಗೆ ಆತನ ಎದುರಿಗೆ ತರುವ ವಿಧಾನವನ್ನು ಹುಡುಕಿದರು.
|
19. ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.
|
20. ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
|
21. ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
|
22. ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?
|
24. ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
|
25. ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ತನ್ನ ಸ್ವಂತ ಮನೆಗೆ ಹೊರಟುಹೋದನು.
|
26. ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.
|
27. ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
|
29. ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.
|
30. ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
|
31. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.
|
33. ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
|
35. ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು.
|
36. ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ.
|
37. ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.
|
39. ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
|