2. ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಹಾಕಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.
|
3. ನೀನು ಹತ್ತು ರೊಟ್ಟಿಗಳನ್ನೂ, ಒಂದಷ್ಟು ಸಿಹಿಪದಾರ್ಥವನ್ನೂ ಮತ್ತು ಒಂದು ಕುಪ್ಪೆ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಹುಡುಗನಿಗೆ ಏನಾಗುವುದೆಂದು ಅವನು ತಿಳಿಸುವನು” ಎಂದು ಹೇಳಿದನು.
|
4. ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿ ಹೋಗಿದ್ದರಿಂದ ಅವನಿಗೆ ಏನು ಕಾಣಿಸುತ್ತಿರಲಿಲ್ಲ.
|
5. ಆದರೆ ಯೆಹೋವನು ಅವನಿಗೆ, “ಯಾರೊಬ್ಬಾಮನ ಹೆಂಡತಿಯು ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋಕ್ತಿಯನ್ನು ಕೇಳುವುದಕ್ಕೆ ತನ್ನನ್ನು ಅನ್ಯಳ ಹಾಗೆ ವೇಷಮರೆಸಿಕೊಂಡು ಬರುತ್ತಾಳೆಂದೂ, ಆಕೆಗೆ ಇಂಥಿಂಥ ಉತ್ತರ ಕೊಡಬೇಕು” ಎಂದು ತಿಳಿಸಿದ್ದನು.
|
6. ಆಕೆಯು ಅಹೀಯನ ಮನೆಯನ್ನು ಪ್ರವೇಶಿಸುತ್ತಿರುವಾಗಲೇ ಅಹೀಯನು ಆಕೆಯ ಕಾಲು ಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ ಬಾ. ಯಾಕೆ ನಿನ್ನನ್ನು ಅನ್ಯಳೆಂದು ತೋರ್ಪಡಿಸಿಕೊಳ್ಳುತ್ತೀ? ನಿನಗೆ ಕಠಿಣವಾದ ಉತ್ತರ ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.
|
7. ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಅಪ್ಪಣೆಯನ್ನು ತಿಳಿಸು. ಆತನು ಅವನಿಗೆ, ‘ನಾನು ನಿನ್ನನ್ನು ಜನರ ಮಧ್ಯದಿಂದ ಉನ್ನತಸ್ಥಾನಕ್ಕೆ ತಂದೆನು. ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದೆನು.
|
8. ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣ ಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ನನ್ನನ್ನು ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ.
|
9. ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.
|
10. ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.
|
11. ಅವರು ನಿರ್ನಾಮವಾಗುವರು. ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ’. ಇದು ಯೆಹೋವನಾದ ನನ್ನ ಮಾತು. ನೀನು ಎದ್ದು ನಿನ್ನ ಮನೆಗೆ ಹೋಗು.
|
13. ಇಸ್ರಾಯೇಲರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಅವನು ಮಾತ್ರ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಅವನೊಬ್ಬನೇ ಸಮಾಧಿಹೊಂದುವನು.
|
14. ಯೆಹೋವನು ಇಸ್ರಾಯೇಲರನ್ನು ಆಳಲು ಬೇರೊಬ್ಬ ಅರಸನನ್ನು ನೇಮಿಸುವನು. ಅವನು ಕೂಡಲೇ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು. ಇನ್ನು ಏನೇನು ಸಂಭವಿಸುವದೋ?
|
15. ಯೆಹೋವನು ಇಸ್ರಾಯೇಲರನ್ನು ಹೊಡೆಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದ್ದರಿಂದ ಆತನು ಅವರನ್ನು ಅವರ ಪೂರ್ವಿಕರಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದುರಿಸಿಬಿಡುವನು.
|
16. ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು. PS
|
17. {ಅಬೀಯ ಮತ್ತು ಯಾರೊಬ್ಬಾಮನ ಮರಣ} PS ಯಾರೊಬ್ಬಾಮನ ಹೆಂಡತಿಯು ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟ ಕೂಡಲೇ ಹುಡುಗನು ಸತ್ತನು.
|
18. ಯೆಹೋವನು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಎಲ್ಲಾ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು.
|
19. ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ಮತ್ತು ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.
|
21. {ಯೆಹೂದ್ಯರ ಅರಸನಾದ ರೆಹಬ್ಬಾಮನು} PS ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಲ್ವತ್ತೊಂದು ವರ್ಷದವನಾಗಿದ್ದು, ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷಗಳ ಕಾಲ ಆಳ್ವಿಕೆ ಮಾಡಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.
|
22. ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ತಮ್ಮ ಪೂರ್ವಿಕರಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.
|
23. ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.
|
24. ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿರುವ ದೇವದಾಸ, ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ಆಚರಿಸುವವರಾದರು. PEPS
|
25. ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರುದ್ಧವಾಗಿ ದಂಡೆತ್ತಿ ಬಂದನು.
|
26. ಅವನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಹಾಗೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.
|
27. ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.
|
28. ಅರಸನು ಯೆಹೋವನ ಆಲಯಕ್ಕೆ ಹೋಗುವಾಗಲೆಲ್ಲಾ ಅವರು ಅವುಗಳನ್ನು ಹಿಡಿದುಕೊಳ್ಳುವರು. ಅಲ್ಲಿಂದ ಅರಸನು ಹಿಂತಿರುಗಿ ಹೋದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುವರು.
|
31. ರೆಹಬ್ಬಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು. PE
|