1. {ಮಂಜೂಷವನ್ನು ದೇವಾಲಯಕ್ಕೆ ತಂದದ್ದು ಮತ್ತು ಪ್ರತಿಷ್ಠಾಪಿಸಿದ್ದು} PS ಅನಂತರ ಅರಸನಾದ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೂ ಕುಲಾಧಿಪತಿಗಳು ಇವರೇ ಮೊದಲಾದ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇಮಿಗೆ ತನ್ನ ಹತ್ತಿರಕ್ಕೆ ಕರೆಯಿಸಿಕೊಂಡನು.
|
5. ಅರಸನಾದ ಸೊಲೊಮೋನನು ಅಲ್ಲಿ ಕೂಡಿ ಬಂದಿದ್ದ ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.
|
6. ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು.
|
7. ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.
|
8. ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲೇ ಇವೆ.
|
9. ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.
|
11. ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ. PEPS
|
13. ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ” ಎಂದು ಪ್ರಾರ್ಥನೆಮಾಡಿದನು. PS
|
14. {ಸೊಲೊಮೋನನ ಭಾಷಣ} PS ಇದಾದ ಮೇಲೆ ಅರಸನು ಎದ್ದು ನಿಂತು ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ,
|
15. “ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ.
|
16. ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು.
|
18. ಆಗ ಯೆಹೋವನು ಅವನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೆ ಸರಿ. ಆದರೂ ನೀನು ಅದನ್ನು ಕಟ್ಟಬಾರದು.
|
20. ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಈ ಆಲಯವನ್ನು ಕಟ್ಟಿದೆನು.
|
21. ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು” ಎಂದು ಹೇಳಿದನು. PS
|
22. {ಸೊಲೊಮೋನನ ಪ್ರಾರ್ಥನೆ} PS ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು,
|
23. “ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.
|
24. ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿರುವೆ. ನಿನ್ನ ಬಾಯಿ ನುಡಿದಿದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿದೆ.
|
25. ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು’ ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.
|
27. “ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?
|
28. ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು. ಈ ಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.
|
29. ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು.
|
30. ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು. PEPS
|
31. “ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ಈ ಯಜ್ಞವೇದಿಯ ಮುಂದೆ ನಿಂತು ಪ್ರಮಾಣಮಾಡುವುದಾದರೆ,
|
32. ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು. PEPS
|
33. “ತಮ್ಮ ಪಾಪಗಳ ಫಲವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದಲ್ಲಿ ನಿನಗೆ ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಮಾಡುವುದಾದರೆ,
|
34. ಪರಲೋಕದಲ್ಲಿರುವ ನೀನು ಅದನ್ನು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮರಳಿ ಬರುವಂತೆಮಾಡು. PEPS
|
35. “ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ,
|
36. ಪರಲೋಕದಲ್ಲಿರುವ ನೀನು ಆಲಿಸಿ, ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು. PEPS
|
37. “ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ,
|
38. ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ಸ್ತುತಿಸಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನು ಮಾಡುವುದಾದರೆ,
|
39. ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.
|
40. ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವರು. PEPS
|
42. ಅಲ್ಲಿ ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವುದು. ಅವನು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವುದಾದರೆ,
|
43. ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.
|
44. ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೋಸ್ಕರ ಎಲ್ಲಿಗಾದರು ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವುದಾದರೆ
|
46. “ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,
|
47. ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,
|
48. ‘ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿ ಪೂರ್ಣಮನಸ್ಸಿನಿಂದ ನಿನ್ನನ್ನು ಪ್ರಾರ್ಥಿಸುವುದಾದರೆ,
|
50. ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ.
|
51. ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷಮಿಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು.
|
52. ನಿನ್ನ ಸೇವಕನ ಮೇಲೆಯೂ, ನಿನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆಯೂ ಕಟಾಕ್ಷವಿಟ್ಟು ಅವರು ಪ್ರಾರ್ಥಿಸುವಾಗೆಲ್ಲಾ ಅವರ ವಿಜ್ಞಾಪನೆಗಳನ್ನು ಲಾಲಿಸು.
|
53. ಕರ್ತನೇ, ಯೆಹೋವನೇ, ನೀನು ನಮ್ಮ ಪೂರ್ವಿಕರನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ, ಸ್ವಕೀಯಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ” ಎಂದು ದೇವರನ್ನು ಪ್ರಾರ್ಥಿಸಿದನು. PS
|
54. {ಸೊಲೊಮೋನನು ಇಸ್ರಾಯೇಲ್ ಸಮೂಹವನ್ನು ಆಶೀರ್ವದಿಸಿದ್ದು} PS ಸೊಲೊಮೋನನು ಆಕಾಶದ ಕಡೆಗೆ ಕೈಯೆತ್ತಿ ಯೆಹೋವನ ಯಜ್ಞವೇದಿಯ ಮುಂದೆ ಮೊಣಕಾಲೂರಿ ಯೆಹೋವನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತು
|
56. “ತಾನು ವಾಗ್ದಾನ ಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ.
|
57. ನಮ್ಮ ದೇವರಾದ ಯೆಹೋವನು ನಮ್ಮ ಪೂರ್ವಿಕರ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ, ಆತನು ನಮ್ಮನ್ನು ಕೈಬಿಡದಿರಲಿ, ನಿರಾಕರಿಸದಿರಲಿ.
|
58. ನಾವು ನಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಿಲಿ.
|
60. ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ ಆತನು ಅಗತ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.
|
61. ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣ ಭಯಭಕ್ತಿಯುಳ್ಳವರಾಗಿ, ಆತನ ವಿಧಿಗಳನ್ನು ಅನುಸರಿಸಿ, ಆತನ ಆಜ್ಞೆಗಳನ್ನು ಕೈಕೊಳ್ಳಿರಿ” ಎಂಬುದೇ. PS
|
63. ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ ಮತ್ತು ಕುರಿಗಳು ಲಕ್ಷದ ಇಪ್ಪತ್ತು ಸಾವಿರ, ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲರೂ ಯೆಹೋವನ ಆಲಯವನ್ನು ಪ್ರತಿಷ್ಠೆ ಮಾಡಿದರು.
|
64. ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ, ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ಚಿಕ್ಕದಾಗಿದ್ದುದರಿಂದ ಸೊಲೊಮೋನನು ಆ ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು.
|
65. ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.
|
66. ಎಂಟನೆಯ ದಿನ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ನೆನದು ಆನಂದಚಿತ್ತರಾಗಿ, ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು. PE
|