1. {ಯೇಹುವಿನ ರಾಜಾಭಿಷೇಕ} PS ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”
|
2. ಆ ಊರನ್ನು ತಲುಪಿದ ನಂತರ ನಿಂಷಿಯ ಮೊಮ್ಮಗನೂ, ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸಿ, ಅವನು ಸಿಕ್ಕಿದಾಗ ಅವನನ್ನು ಅವರ ಜೊತೆಗಾರರ ಗುಂಪಿನಿಂದ ಒಳಗಿನ ಕೋಣೆಗೆ ಕರೆದುಕೊಂಡು ಹೋಗು.
|
3. ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, “ಯೆಹೋವನು ಹೀಗೆ ಅನ್ನುತ್ತಾನೆ, ‘ನಾನು ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ’ ಎಂಬುದಾಗಿ ಹೇಳಿದ ಕೂಡಲೆ ಬಾಗಿಲು ತೆರೆದು ಓಡಿಹೋಗು” ಎಂದು ಆಜ್ಞಾಪಿಸಿದನು. PEPS
|
5. ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆ ಸೇರಿರುವುದನ್ನು ಕಂಡು ಅವನು ಅವರನ್ನು ಸಮೀಪಿಸಿ, “ನಾಯಕನೇ ನಿನಗೊಂದು ಮಾತು ಹೇಳುವುದಿದೆ” ಎಂದನು. ಯೇಹುವು ಅವನಿಗೆ, “ನಮ್ಮಲ್ಲಿ ಯಾರಿಗೆ?” ಎಂದು ಕೇಳಲು ಅವನು, “ಸೇನಾಧಿಪತಿಯಾದ ನಿನಗೆ” ಎಂದು ಉತ್ತರಕೊಟ್ಟನು.
|
6. ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಆತನು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ.
|
7. ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.
|
8. ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು.
|
10. ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ. ನಾಯಿಗಳು ಅವಳ ಹೆಣವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು’ ” ಎನ್ನುತ್ತಾನೆ ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು. PEPS
|
11. ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.
|
12. ಆದರೆ ಅವರು, “ಅದು ಸುಳ್ಳು, ಅವನು ಹೇಳಿದ್ದನ್ನು ತಿಳಿಸು” ಎಂದು ಅವನನ್ನು ಒತ್ತಾಯಪಡಿಸಿದ್ದರಿಂದ ಯೇಹುವು, “ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನು ಹೇಳಿದ ಎಲ್ಲ ಮಾತುಗಳನ್ನು ಹೇಳಿದನು.”
|
13. ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು. PS
|
14. {ಇಸ್ರಾಯೇಲಿನ ಅರಸನಾದ ಯೋರಾಮನ ಕೊಲೆ} PS ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು.
|
15. ಅರಸನಾದ ಯೋರಾಮನು, ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಗಾಯ ಹೊಂದಿದ್ದರಿಂದ, ಅದನ್ನು ವಾಸಿಮಾಡಿಕೊಳ್ಳುವುದಕ್ಕಾಗಿ ಹಿಂದಿರುಗಿ ಇಜ್ರೇಲ ಪಟ್ಟಣಕ್ಕೆ ಬಂದಿದ್ದನು. ಯೇಹುವು ತನ್ನ ಜೊತೆಗಾರರಿಗೆ, “ನೀವು ನನ್ನವರಾಗಿದ್ದರೆ ಈ ಸುದ್ದಿಯು ಇಜ್ರೇಲನ್ನು ಮುಟ್ಟದಂತೆ ಒಬ್ಬನನ್ನೂ ಈ ಪಟ್ಟಣದಿಂದ ಹೊರಗೆ ಹೋಗದಂತೆ ನೋಡಿಕೊಳ್ಳಿ” ಎಂದು ಹೇಳಿದನು. PEPS
|
16. ಅನಂತರ ಯೇಹುವು ರಥದಲ್ಲಿ ಕುಳಿತು ಇಜ್ರೇಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನು ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದನು.
|
17. ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, “ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೊ? ಎಂದು ಕೇಳುವುದಕ್ಕಾಗಿ ಕಳುಹಿಸು” ಎಂಬುದಾಗಿ ಆಜ್ಞಾಪಿಸಿದನು.
|
18. ರಾಹುತನು ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕು ನೀನು ನನ್ನ ಹಿಂದೆ ಬಾ” ಎಂದು ಹೇಳಿದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. PEPS
|
19. ಅವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕಾಗಿದೆ ನೀನು ನನ್ನ ಹಿಂದೆ ಬಾ” ಎಂದನು.
|
20. ಕಾವಲುಗಾರನು ತಿರುಗಿ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವೇ ಇರಬೇಕು” ಎಂದು ಹೇಳಿದನು.
|
21. ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
|
22. ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.
|
24. ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು. ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿ ರಥದಲ್ಲಿ ಬಿದ್ದನು. PEPS
|
25. ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು:
|
26. ಯೆಹೋವನು ಅಹಾಬನಿಗೆ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ, ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಬಿಸಾಡು” ಎಂದು ಹೇಳಿದನು. PS
|
27. {ಯೆಹೂದ್ಯರ ಅರಸನಾದ ಅಹಜ್ಯನ ಕೊಲೆ} PS ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.
|
28. ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
|
30. {ಈಜೆಬೆಲಳ ಕೊಲೆ} PS ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು. PEPS
|
31. ಅನಂತರ ಅರಮನೆಯ ಬಾಗಿಲಿನಿಂದ ಪ್ರವೇಶಮಾಡಿದ ಯೇಹುವನ್ನು ಕಂಡು ಅವನಿಗೆ, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವೋ? ಕ್ಷೇಮವೋ?” ಎಂದು ಕೇಳಿದಳು.
|
32. ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು. PEPS
|
33. ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ” ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು.
|
34. ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು. PEPS
|
35. ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.
|
36. ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ, “ಯೆಹೋವನು, ತನ್ನ ದಾಸನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು, ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು.
|
37. ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು. PE
|