1. {ಅಬ್ಷಾಲೋಮನ ಮರಣ} PS ತರುವಾಯ ಅರಸನಾದ ದಾವೀದನು ತನ್ನ ಬಳಿಯಲ್ಲಿ ಇದ್ದ ಸೈನಿಕರನ್ನು ಎಣಿಸಿ, ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಮತ್ತು ಶತಾಧಿಪತಿಗಳನ್ನು ನೇಮಿಸಿದನು.
|
2. ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನು ನಿಮ್ಮೊಂದಿಗೆ ಬರುತ್ತೇನೆ” ಎಂದು ಹೇಳಿದನು.
|
3. ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ * ಅಥವಾ ನಮ್ಮಂತೆಯೇ ಹತ್ತು ಸಾವಿರ ಮಂದಿ ಇದ್ದಾರೆ. ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.
|
4. ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.
|
5. ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.
|
8. ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು. PEPS
|
9. ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.
|
10. ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, “ಅಗೋ, ಆ ದೇವದಾರು ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆನು” ಎಂದು ಹೇಳಿದನು.
|
11. ಯೋವಾಬನು ಅವನಿಗೆ, “ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ತಲಾಂತು ಬೆಳ್ಳಿಯನ್ನು, ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು” ಎಂದನು.
|
12. ಅದಕ್ಕೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ ನಾನು ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಗೂ ಮತ್ತು ಇತ್ತೈಗೂ, ‘ಜಾಗರೂಕತೆಯಿಂದಿರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದ್ದಾನಲ್ಲವೇ?
|
13. ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ತಿಳಿಯದೆ ಇರುವುದಿಲ್ಲ. ಆಗ ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ” ಎಂದು ಉತ್ತರ ಕೊಟ್ಟನು.
|
14. ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ
|
16. ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ತುತ್ತೂರಿಯನ್ನು ಊದಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು.
|
17. ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
|
18. ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ. PS
|
19. {ದಾವೀದನು ಮಗನಿಗಾಗಿ ಗೋಳಾಡಿದ್ದು} PS ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭ ವರ್ತಮಾನವನ್ನು ತಿಳಿಸುವೆನು” ಎಂದನು.
|
20. ಯೋವಾಬನು ಅವನಿಗೆ, “ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ” ಎಂದು ಹೇಳಿದನು.
|
21. ಯೋವಾಬನು ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು” ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟುಹೋದನು.
|
22. ಚಾದೋಕನ ಮಗನಾದ ಅಹೀಮಾಚನು ಪುನಃ ಯೋವಾಬನಿಗೆ, “ಆಗಿದ್ದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡು” ಎಂದು ಬೇಡಿಕೊಂಡನು. ಅದಕ್ಕೆ ಅವನು, “ಮಗನೇ ಯಾಕೆ ಹೋಗಬೇಕೆನ್ನುತ್ತೀ? ಅದಕ್ಕಾಗಿ ನಿನಗೆ ಬಹುಮಾನ ಸಿಕ್ಕುವುದಿಲ್ಲವಲ್ಲಾ” ಎಂದನು.
|
23. ಆಗ ಅಹೀಮಾಚನು ಪುನಃ “ಚಿಂತೆಯಿಲ್ಲ ನನ್ನನ್ನು ಕಳುಹಿಸು” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು “ಹೋಗು” ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು. PEPS
|
24. ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು.
|
25. ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು” ಎಂದನು. ಆ ಮನುಷ್ಯನು ಬರಬರುತ್ತಾ ಸಮೀಪವಾದನು.
|
26. ಅಷ್ಟರಲ್ಲಿ ಕಾವಲುಗಾರರು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಬ್ಬಂಟಿಗನಾಗಿ ಬರುತ್ತಿದ್ದಾನೆ” ಎಂದು ಅರಸನಿಗೆ ತಿಳಿಸಿದನು. ಆಗ ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು” ಎಂದು ಹೇಳಿದನು.
|
27. ಆಗ ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಶುಭವರ್ತಮಾನ ತರುವವನು” ಎಂದನು.
|
28. ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು.
|
29. ಆಗ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ” ಎಂದು ಉತ್ತರಕೊಟ್ಟನು.
|
31. ಅಷ್ಟರಲ್ಲಿ ಕೂಷ್ಯನು ಬಂದು, “ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ” ಎಂದನು.
|
32. ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಲು ಅವನು, “ನನ್ನ ಒಡೆಯನಾದ ಅರಸನ ಶತ್ರುಗಳಿಗೂ, ಅವನಿಗೆ ಕೇಡು ಮಾಡುವುದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ” ಎಂದು ಉತ್ತರ ಕೊಟ್ಟನು.
|
33. ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು. PE
|