1. {ದಾವೀದನಿಗೆ ಯೆಹೂದ್ಯರ ಅರಸನಾಗಿ ರಾಜಾಭಿಷೇಕವಾದದ್ದು} PS ಅನಂತರ ದಾವೀದನು ಯೆಹೋವನನ್ನು, “ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು.
|
2. ಆಗ ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳನ್ನೂ ಕರೆದುಕೊಂಡು ಅಲ್ಲಿಗೆ ಹೋದನು.
|
3. ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಮಾಡಿದರು. PEPS
|
4. ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.
|
5. ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ.
|
7. ಯೆಹೂದ್ಯರು ನನ್ನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ನಿಮ್ಮ ಅರಸನಾದ ಸೌಲನು ಸತ್ತುಹೋದರೂ ನೀವು ಶೂರರಾಗಿರಿ, ನಿಮ್ಮ ಕೈಗಳು ಜೋಲುಬೀಳದಿರಲಿ” ಎಂದು ಹೇಳಿ ಕಳುಹಿಸಿದನು. PS
|
8. {ಈಷ್ಬೋಶೆತನು ಇಸ್ರಾಯೇಲಿನಲ್ಲಿ ಅರಸನಾದದ್ದು} PS ಸೌಲನ ಸೇನಾಧಿಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ * ಅಥವಾ ಈಷಬಾಲೆ. ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿಮಿಗೆ ಕರೆದುಕೊಂಡು ಹೋಗಿ
|
9. ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ, ಎಫ್ರಾಯೀಮ್, ಬೆನ್ಯಾಮೀನ ಜನರಿಗೂ ಬೇರೆ ಎಲ್ಲಾ ಇಸ್ರಾಯೇಲರಿಗೂ ಅರಸನನ್ನಾಗಿ ಮಾಡಿದನು.
|
10. ಸೌಲನ ಮಗನಾದ ಈಷ್ಬೋಶೆತನು ನಲ್ವತ್ತು ವರ್ಷದವನಾದಾಗ ಇಸ್ರಾಯೇಲರನ್ನು ಆಳತೊಡಗಿ ಎರಡು ವರ್ಷ ರಾಜ್ಯಭಾರ ಮಾಡಿದನು. ಯೆಹೂದ್ಯರು ಮಾತ್ರ ದಾವೀದನನ್ನು ಹಿಂಬಾಲಿಸಿದರು.
|
12. {ಇಸ್ರಾಯೇಲ್ ಮತ್ತು ಯೆಹೂದ್ಯರ ನಡುವೆ ಯುದ್ಧ} PS ಒಂದು ದಿನ ನೇರನ ಮಗನಾದ ಅಬ್ನೇರನೂ, ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.
|
13. ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು.
|
14. ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ” ಎಂದು ಹೇಳಲು ಯೋವಾಬನು, “ಆಗಲಿ” ಅಂದನು.
|
15. ಆಗ ಸೌಲನ ಮಗನಾದ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಸಮಸಂಖ್ಯೆಯಾಗಿ ಹೊರಟು ಬಂದರು.
|
16. ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆಹಿಡಿದು, ಕತ್ತಿಯಿಂದ ಪಕ್ಕೆಯಲ್ಲಿ ತಿವಿದಿದ್ದರಿಂದ ಎಲ್ಲರೂ ಸತ್ತು ಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ † ಅಥವಾ ಹದಗತ್ತಿ ಹೊಲ. ಹೆಲ್ಕಾತ್ ಹಸ್ಸೂರಿಂ” ಎಂದು ಹೆಸರಾಯಿತು.
|
18. {ಅಸಾಹೇಲನ ಮರಣ} PS ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.
|
21. ಆಗ ಅಬ್ನೇರನು ಅವನಿಗೆ, “ನನ್ನನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಿಕೊಂಡು ಯುವಕರಲ್ಲೊಬ್ಬನನ್ನು ಹಿಡಿದು ಸುಲಿದುಕೋ” ಎಂದು ಹೇಳಿದನು. ಆದರೆ ಅಸಾಹೇಲನು ಒಪ್ಪಲಿಲ್ಲ.
|
22. ಅಬ್ನೇರನು ತಿರುಗಿ ಅಸಾಹೇಲನಿಗೆ, “ನನ್ನನ್ನು ಬಿಟ್ಟು ಹೋಗು, ನಾನೇಕೆ ನಿನ್ನನ್ನು ನೆಲಕ್ಕುರುಳಿಸಬೇಕು? ಹಾಗೆ ಮಾಡಿದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ” ಅಂದನು.
|
23. ಅಸಾಹೇಲನು ಬಿಟ್ಟು ಹೋಗುವುದಕ್ಕೆ ಒಪ್ಪದ ಕಾರಣ ಅಬ್ನೇರನು ಬರ್ಜಿಯನ್ನು ಹಿಂದಿನಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಹೊರಗೆ ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತು ಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.
|
24. ಆದರೆ ಯೋವಾಬನೂ, ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು “ಅಮ್ಮಾ” ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮಾನವಾಯಿತು. ಆ ಗುಡ್ಡವು ಗಿಬ್ಯೋನಿನ ಅರಣ್ಯ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿರುತ್ತದೆ.
|
26. ಆಗ ಅಬ್ನೇರನು, “ಯೋವಾಬನನ್ನು ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ” ಎಂದನು.
|
27. ಅದಕ್ಕೆ ಯೋವಾಬನು, “ದೇವರ ಜೀವದಾಣೆ, ಈಗ ನೀನು ಈ ಮಾತುಗಳನ್ನು ಹೇಳದಿದ್ದರೆ ಜನರು ನಾಳೆ ಬೆಳಗಾಗುವವರೆಗೆ ತಮ್ಮ ಬಂಧುಗಳನ್ನು ಹಿಂದಟ್ಟದೆ ಬಿಡುವುದಿಲ್ಲ” ಎಂದು ಉತ್ತರಕೊಟ್ಟು ಕೂಡಲೇ ತುತ್ತೂರಿಯನ್ನು ಊದಿಸಿದನು.
|
29. ಅಬ್ನೇರನೂ ಅವನ ಜನರೂ ಅರಾಬಾ ತಗ್ಗಿನಲ್ಲಿ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಯೊರ್ದನ್ ಹೊಳೆದಾಟಿ, ‡ ಅಂದರೆ ಬೆಳಿಗ್ಗೆಯೆಲ್ಲಾ. ಬಿಥ್ರೋನ ಕಣಿವೆಯನ್ನು ಹಾದು, ಮಹನಯಿಮಿಗೆ ಸೇರಿದರು. PEPS
|
30. ಯೋವಾಬನು ಅಬ್ನೇರನನ್ನು ಹಿಂದಟ್ಟದೆ ಬಿಟ್ಟು, ಹಿಂದಿರುಗಿ ಬಂದು, ಜನರನ್ನು ಸೇರಿಸಿ ಲೆಕ್ಕಮಾಡಿದಾಗ ಅವರಲ್ಲಿ ದಾವೀದನ ಹತ್ತೊಂಬತ್ತು ಮಂದಿ ಸೈನಿಕರೂ ಅಸಾಹೇಲನೂ ಇರಲಿಲ್ಲ.
|
32. ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು. PE
|