1. ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು. PS
|
2. {ದಾವೀದನ ಮಕ್ಕಳು} PS ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು; ಚೊಚ್ಚಲ ಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು.
|
3. ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.
|
5. ಆರನೆಯವನು ಇತ್ರಾಮನು. ಇವನು ದಾವೀದನಿಗೆ ಅವನ ಹೆಂಡತಿಯಾದ ಎಗ್ಲಳಲ್ಲಿ ಹುಟ್ಟಿದವನು. ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಇವರೇ. PS
|
6. {ಅಬ್ನೇರನು ದಾವೀದನ ಪಕ್ಷಕ್ಕೆ ಸೇರಿದ್ದು} PS ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧ ನಡೆಯುತ್ತಿರುವಾಗ ಸೌಲನ ವಂಶದವರಲ್ಲಿ ಅಬ್ನೇರನೇ ಬಲಿಷ್ಠನಾಗಿದ್ದನು.
|
7. ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, “ನೀನು ನನ್ನ ತಂದೆಯ ಉಪಪತ್ನಿಯರನ್ನು ಕೂಡಿದ್ದೇಕೆ?” ಎಂದು ಕೇಳಿದನು.
|
8. ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈ ವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ಮಿತ್ರರಿಗೂ ದಯೆತೋರಿಸುತ್ತಿದ್ದೇನಲ್ಲಾ. ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಈ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?
|
9. ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,
|
10. ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆ ಹೋದರೆ, ಆತನು ನನಗೆ ಬೇಕಾದದ್ದನ್ನು ಮಾಡಲಿ” ಅಂದನು.
|
12. ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಪ್ರಯತ್ನದಲ್ಲಿ ನಾನು ನಿನ್ನ ಸಂಗಡ ಕೈಜೋಡಿಸುತ್ತೇನೆ” ಎಂದು ಹೇಳಿಸಿದನು.
|
13. ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ಆದರೆ ನಿನ್ನಿಂದ ನನಗೆ ಒಂದು ಸಹಾಯ ಬೇಕು. ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ, ನೀನು ನನ್ನ ಮುಖವನ್ನು ನೋಡಕೂಡದು” ಎಂದು ಉತ್ತರಕೊಟ್ಟನು.
|
14. ಆಗ ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು” ಎಂಬುದಾಗಿ ಆಜ್ಞಾಪಿಸಿದನು.
|
16. ಆಗ ಪಲ್ಟೀಯೇಲನು ಬಹುರೀಮಿನವರೆಗೆ ಅಳುತ್ತಾ ಆಕೆಯ ಹಿಂದೆ ಹೋದನು. ಅನಂತರ ಅಬ್ನೇರನು ಅವನಿಗೆ, “ಹಿಂದಿರುಗಿ ಮನೆಗೆ ಹೋಗು” ಎಂದು ಹೇಳಲು ಅವನು ಹಿಂದಿರುಗಿ ಹೋದನು. PEPS
|
18. ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ” ಎಂದು ಹೇಳಿದನು.
|
19. ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು ಇಸ್ರಾಯೇಲರೂ ಬೆನ್ಯಾಮೀನ್ಯರೆಲ್ಲರೂ ಒಪ್ಪಿಕೊಂಡು ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕೋಸ್ಕರ ಹೆಬ್ರೋನಿಗೆ ಹೊರಟನು.
|
21. ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಾಯೇಲರನ್ನೆಲ್ಲಾ ಕೂಡಿಸಿ, ನನ್ನ ಒಡೆಯನಾದ ಅರಸನ ಬಳಿಗೆ ಕರೆದುಕೊಂಡು ಬರುವೆನು. ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು. ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು” ಎಂದು ಹೇಳಲು ದಾವೀದನು ಅವನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು. PS
|
22. {ಅಬ್ನೇರನ ಹತ್ಯೆ} PS ಸುಲಿಗೆ ಮಾಡುವುದಕ್ಕಾಗಿ ಹೋಗಿದ್ದ ದಾವೀದನ ಭಟರು ಯೋವಾಬನೂ ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂತಿರುಗಿ ಬಂದರು. ಅವನು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು.
|
23. ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ, ಅರಸನು ಅವನನ್ನು ಸುರಕ್ಷಿತವಾಗಿ ಕಳುಹಿಸಿದನೆಂದೂ ತಿಳಿದು, ಅರಸನ ಬಳಿಗೆ ಹೋಗಿ,
|
24. “ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ. ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದೇಕೆ?
|
25. ನೇರನ ಮಗನಾದ ಅಬ್ನೇರನ ಸಂಗತಿ ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವುದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೇ” ಎಂದು ಹೇಳಿ,
|
26. ಯೋವಾಬನು ದಾವೀದನನ್ನು ಬಿಟ್ಟು, ಹೊರಗೆ ಹೋಗಿ, ಅಬ್ನೇರನನ್ನು ಕರೆತರುವಂತೆ ದೂತರನ್ನು ಕಳುಹಿಸಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ.
|
27. ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು. PEPS
|
28. ಸ್ವಲ್ಪ ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ, ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.
|
29. ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.
|
30. ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ಸಾಯಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು. PS
|
31. {ದಾವೀದನು ಅಬ್ನೇರನಿಗಾಗಿ ಶೋಕಿಸಿದ್ದು} PS ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ” ಎಂದು ಆಜ್ಞಾಪಿಸಿ ತಾನು ಶವಯಾತ್ರೆ ಹಿಂದೆ ಹೋದನು.
|
32. ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು. ಜನರೆಲ್ಲರೂ ಅತ್ತರು.
|
34. ನಿನ್ನ ಕೈಗಳು ಕಟ್ಟಲ್ಪಡಲಿಲ್ಲ. ನಿನ್ನ ಕಾಲುಗಳಿಗೆ ಬೇಡಿಗಳು ಹಾಕಿರಲಿಲ್ಲ.
ನೀನು ದುಷ್ಟರಿಂದ ಹತನಾದಂತೆ ಹತನಾದಿ” ಎಂದು ಶೋಕಗೀತೆಯನ್ನು ಹಾಡಲು ಜನರು ತಿರುಗಿ ಅತ್ತರು. PEPS |
35. ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟು ಹೇಳಿದನು.
|
37. ನೇರನ ಮಗನಾದ ಅಬ್ನೇರನ ಕೊಲೆಯಲ್ಲಿ ಅರಸನು ಕೈಹಾಕಲಿಲ್ಲವೆಂಬುದು ಅವನ ಎಲ್ಲಾ ಜನರಿಗೂ ಇಸ್ರಾಯೇಲರಿಗೂ ಅದೇ ದಿನ ಗೊತ್ತಾಯಿತು.
|
38. ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಾಯೇಲರಲ್ಲಿ ಹತವಾದವನು, ಪ್ರಭುವೂ, ಮಹಾಪುರುಷನೂ ಆಗಿದ್ದಾನೆಂಬುದು ನಿಮಗೆ ಗೊತ್ತಿದೆಯಲ್ಲಾ.
|
39. ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು. PE
|