1. {ಈಷ್ಬೋಶೆತನು ಕೊಲ್ಲಲ್ಪಟ್ಟದ್ದು} PS ಅಬ್ನೇರನು ಹೆಬ್ರೋನಿನಲ್ಲಿ ಸತ್ತನೆಂಬ ವರ್ತಮಾನವು ಸೌಲನ ಮಗನಾದ ಈಷ್ಬೋಶೆತನಿಗೆ ಮುಟ್ಟಿದಾಗ ಅವನ ಕೈಗಳು ಜೋಲುಬಿದ್ದವು. ಇಸ್ರಾಯೇಲರೆಲ್ಲರು ಕಳವಳಗೊಂಡರು.
|
2. ಸೌಲನ ಮಗನಿಗೆ ಬಾಣ, ರೇಕಾಬ ಎಂಬ ಇಬ್ಬರು ಸೇನಾಧಿಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. ಬೇರೋತ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ.
|
4. ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾಗಿದ್ದು ಹೇಗೆಂದರೆ, ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ, ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು. PEPS
|
5. ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬುವರು ಅವನ ಮನೆಯ ಬಳಿಗೆ ಬಂದರು.
|
6. ಆಗ ಬಾಗಿಲು ಕಾಯುವವಳು ಗೋದಿ ಕೇರುತ್ತಿದ್ದು ಹಾಗೆಯೇ ತೂಕಡಿಸಿ ನಿದ್ದೆಮಾಡುತ್ತಿರುವುದನ್ನು ಬಾಣ ಮತ್ತು ರೇಕಾಬರು ಕಂಡು ರಹಸ್ಯವಾಗಿ ಒಳಗೆ ಜಾರಿಕೊಂಡರು.
|
7. ಅವರು ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದು, ಕೊಂದುಹಾಕಿ, ತಲೆಯನ್ನು ಕತ್ತರಿಸಿ, ಅದನ್ನು ತೆಗೆದುಕೊಂಡು, ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ,
|
8. ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು, ಆ ತಲೆಯನ್ನು ಅವನಿಗೆ ತೋರಿಸಿ, “ಇಗೋ ನಿನ್ನ ಜೀವತೆಗೆಯಬೇಕೆಂದಿದ್ದ ನಿನ್ನ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ. ಅರಸನಾದ ನಮ್ಮ ಒಡೆಯನಿಗಾಗಿ ಸೌಲನಿಗೂ ಅವನ ಸಂತಾನಕ್ಕೂ ಯೆಹೋವನು ಈ ಹೊತ್ತು ಮುಯ್ಯಿ ತೀರಿಸಿದ್ದಾನೆ” ಅಂದನು.
|
10. “ಸೌಲನ ಮರಣವಾರ್ತೆಯನ್ನು ತಿಳಿಸುವುದು ಶುಭಕರವೆಂದು ಭಾವಿಸಿ ಬಂದು, ನನಗೆ ಹೇಳಿದವನನ್ನು ಹಿಡಿದು ಅವನಿಗೆ ಚಿಕ್ಲಗಿನಲ್ಲಿ ಮರಣದಂಡನೆಯೆಂಬ ಬಹುಮಾನವನ್ನು ಸಲ್ಲಿಸಿದೆನಲ್ಲವೋ?
|
11. ಮಹಾ ದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು” ಎಂದು ಹೇಳಿ,
|
12. ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು, ಕೈಕಾಲುಗಳನ್ನು ಕತ್ತರಿಸಿ, ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು. PE
|