1. {ಅಧಿಕಾರಿಗಳ ಮುಂದೆ ಪೇತ್ರ ಯೋಹಾನರು} PS ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.
|
2. ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.
|
7. ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,
|
9. ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ.
|
10. ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ. PEPS
|
12. ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು. PEPS
|
13. ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.
|
14. ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು.
|
16. “ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.
|
17. ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”
|
18. ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು.
|
19. ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;
|
21. ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.
|
23. ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.
|
24. ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
|
25. ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ,
“ ‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು? |
26. ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ
ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ? |
27. ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
|
29. ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ
|
31. ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು. PS
|
32. {ವಿಶ್ವಾಸಿಗಳು ಒಟ್ಟಾಗಿ ಆಸ್ತಿಯನ್ನು ಅನುಭೋಗಿಸುತ್ತಿದ್ದರು} PS ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.
|
33. ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.
|
34. ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು
|
35. ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು. PEPS
|
36. ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.
|