2. “ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ.
|
5. ಅವನಿಗೆ ದೇವರಾತ್ಮವನ್ನು ದಯಪಾಲಿಸಿ, ಅದಕ್ಕೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪ ಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.
|
6. ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.
|
11. ಅಭಿಷೇಕತೈಲ ಮತ್ತು ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.” PS
|
13. “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೇ ಆಚರಿಸಬೇಕು. ನಿಮ್ಮನ್ನು ಶುದ್ಧಿಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯ ಇರುವ ಗುರುತು.
|
14. ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.
|
15. ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು.
|
16. ಆದುದರಿಂದ ಇಸ್ರಾಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ, ಅವರ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.
|
17. ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?” PEPS
|
18. ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ. PE
|