3. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು.
|
4. ತುಟ್ಟತುದಿಯ ಚಿಗುರುಗಳನ್ನು ಕಚ್ಚಿ, ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ಬಹಳ ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು. PEPS
|
5. “ ‘ಆಮೇಲೆ ಅದು ಆ ದೇವದಾರು ಇದ್ದ ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂಮಿಯಲ್ಲಿ ನೆಟ್ಟು, ನೀರವಂಜಿಯ ಮರದ ಹಾಗೆ ಬೆಳೆಯಿಸಿತು.
|
6. ಅದು ಮೊಳೆತು ದ್ರಾಕ್ಷಾಲತೆಯಾಗಿ ತುಂಬಾ ಹರಡಿಕೊಂಡು ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ ಅದರ ಕೆಳಗೆ ತನ್ನ ಬೇರುಗಳನ್ನು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು. PEPS
|
7. “ ‘ಅಗಲವಾದ ರೆಕ್ಕೆಗಳುಳ್ಳ ಗರಿ ತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.
|
8. ಅದು ಸೊಂಪಾದ ದ್ರಾಕ್ಷಾಲತೆಯಾಗಿ ರೆಂಬೆಗಳನ್ನು ಹರಡಿ ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.’ ” PEPS
|
9. ಈ ಮಾತನ್ನು ನುಡಿ, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅದು ಸಮೃದ್ಧವಾಗಿಯೇ ಇರುವುದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು, ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದು ಬೇರು ಸಹಿತ ಕೀಳಲ್ಪಡುವುದು; ಬಹಳ ಬಲದಿಂದಲ್ಲ, ಬಹಳ ಜನರಿಂದಲ್ಲ.
|
10. ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವುದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವುದಲ್ಲವೇ? ಬೆಳೆದ ಪಾತಿಯಲ್ಲಿಯೇ ಒಣಗಿಹೋಗುವುದು.” PS
|
12. “ದ್ರೋಹಿ ವಂಶದವರಾದ ಈ ಜನರಿಗೆ ಹೀಗೆ ಹೇಳು, ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಮತ್ತು ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದನು.
|
15. ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?” PEPS
|
16. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇವನು ಯಾರಿಂದ ಅರಸನಾಗಿ ನೇಮಿಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾರ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವುದು ಖಂಡಿತ.
|
17. ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಕೋಟೆಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗುವುದಿಲ್ಲ.
|
18. ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಆಣೆಮಾಡಿದರೆ ಪ್ರಯೋಜನವೇನು? ಇದನ್ನೆಲ್ಲಾ ಮಾಡಿದ್ದರಿಂದ ಇವನು ಪಾರಾಗನು.” PEPS
|
19. ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ, ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು.
|
20. ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬಿಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.
|
21. ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.” PEPS
|
22. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು.
|
23. ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.
|
24. ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರಗೊಳಿಸಿ, ಹಸುರಾದದ್ದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವವು. ಇದನ್ನು ಯೆಹೋವನಾದ ನಾನೇ ನುಡಿದು ನಡೆಸಿದ್ದೇನೆ.” PE
|