1. {ಎಜ್ರನೊಂದಿಗೆ ಬಾಬಿಲೋನಿನಿಂದ ಹಿಂದಿರುಗಿದವರ ಪಟ್ಟಿ} PS ಅರ್ತಷಸ್ತ ರಾಜನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ. PEPS
|
2. ಫೀನೆಹಾಸನ ಸಂತಾನದವರಲ್ಲಿ ಗೇರ್ಷೋಮ್; ಈತಾಮಾರನ ಸಂತಾನದವರಲ್ಲಿ ದಾನಿಯೇಲ್; ದಾವೀದನ ಸಂತಾನದವರಲ್ಲಿ ಶೆಕನ್ಯನ ಮೊಮ್ಮಗನಾದ ಹಟ್ಟೂಷ್.
|
15. ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯಮಾಡಿಕೂಂಡ ಮೇಲೆ ಸಾಧಾರಣ ಜನರೂ, ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂತು.
|
16. ಆದುದರಿಂದ ನಾನು ಪ್ರಧಾನರಾದ ಎಲೀಯೆಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ, ಪಂಡಿತರಾದ ಯೋಯಾರೀಬ್ ಎಲ್ನಾತಾನ್ ಇವರನ್ನೂ ಕರೆಯಿಸಿದೆನು.
|
17. ಅವರ ತರುವಾಯ ನಾನು ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ, ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ, ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದ ಪರಿಚಾರಕರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ.
|
18. ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರೆಕ್ಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ, ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ,
|
20. ದಾವೀದನೂ ಅವನ ಮುಖ್ಯಸ್ಥರನ್ನು ಲೇವಿಯರೊಂದಿಗೆ ಸೇವೆಗಾಗಿ ಕೊಟ್ಟು ದೇವಸ್ಥಾನ ಪರಿಚಾರಕರಲ್ಲಿ ಇನ್ನೂರಿಪ್ಪತ್ತು ಜನರನ್ನೂ ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು. PEPS
|
21. ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.
|
22. ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು.
|
24. {ದೇವಾಲಯಕ್ಕೆ ಸಲ್ಲಿಸಿದ ಕಾಣಿಕೆಗಳು} PS ಅನಂತರ ನಾನು ಯಾಜಕರ ಮುಖ್ಯಸ್ಥರಲ್ಲಿ ಶೇರೇಬ್ಯ, ಹಷಬ್ಯ ಇವರ ಸಹೋದರರಲ್ಲಿ ಹತ್ತು ಜನರನ್ನೂ ಆರಿಸಿಕೊಂಡು ಅರಸನಿಂದಲೂ, ಅವನ ಮಂತ್ರಿಗಳಿಂದಲೂ, ಸರದಾರರಿಂದಲೂ ಮತ್ತು
|
25. ಇಸ್ರಾಯೇಲರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ, ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು. PEPS
|
27. ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು * ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು ಅಂದರೆ 8.5 ಕಿಲೋಗ್ರಾಂ. ; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.
|
28. ನಾನು ಅವರಿಗೆ, “ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ, ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು.
|
29. ಆದುದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿ ಇಡುವವರೆಗೂ ಕಾಯಿರಿ” ಎಂದು ಹೇಳಿದನು. PEPS
|
30. ಆ ಯಾಜಕರೂ ಮತ್ತು ಲೇವಿಯರೂ, ಯೆರೂಸಲೇಮಿನ ದೇವಾಲಯಕ್ಕೆ ತಲುಪಿಸುವುದಕ್ಕೋಸ್ಕರ ಬೆಳ್ಳಿಬಂಗಾರವನ್ನೂ, ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿಟ್ಟುಕೊಂಡರು.
|
31. ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.
|
33. ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗನಾದ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.
|
35. ದೇಶಾಂತರದ ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲರ ದೇವರಿಗೆ ತೊಂಭತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ಸಮಸ್ತ ಇಸ್ರಾಯೇಲರ ನಿಮಿತ್ತವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮವೇ.
|
36. ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು. PE
|