1. {ಫರೋಹನ ಕನಸುಗಳು} PS ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.
|
3. ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು.
|
4. ಅವಲಕ್ಷಣವಾದ ಈ ಬಡ ಏಳು ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು. PEPS
|
5. ಅವನು ಮತ್ತೆ ನಿದ್ರೆಮಾಡಿದಾಗ ಮತ್ತೊಂದು ಕನಸು ಬಿತ್ತು. ಅದೇನೆಂದರೆ, ಒಳ್ಳೆಯ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.
|
7. ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚೆತ್ತು, ಅದನ್ನು ಕನಸೆಂದು ತಿಳಿದುಕೊಂಡನು. PEPS
|
8. ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ. PEPS
|
9. ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ.
|
10. ಫರೋಹನು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ, ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನನ್ನೂ ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿ ಇಟ್ಟಾಗ,
|
12. ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು. ಅವನು ಮೈಗಾವಲಿನವರ ಅಧಿಪತಿಯ ಸೇವಕನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ತಿಳಿಸಿದನು. ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
|
13. ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು. ಅವನು ಹೇಳಿದಂತೆಯೇ ನನ್ನ ಉದ್ಯೋಗವು ಪುನಃ ನನಗೆ ದೊರಕಿತು. ಅಡಿಗೆ ಭಟ್ಟರ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು” ಎಂದನು. PEPS
|
14. ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು. PEPS
|
15. ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು. PEPS
|
16. ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು. PEPS
|
19. ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಆಕಳುಗಳು ಏರಿ ಬಂದವು. ಇಂಥ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿರಲಿಲ್ಲ.
|
21. ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಿಬರಲಿಲ್ಲ. ಅವು ಮೊದಲಿದ್ದಂತೆ ಬಡವಾಗಿಯೇ ಇದ್ದವು. ಆಗ ನನಗೆ ಎಚ್ಚರವಾಯಿತು. PEPS
|
24. ಬತ್ತಿ ಹೋಗಿದ್ದ ತೆನೆಗಳು ಆ ಏಳು ಒಳ್ಳೆ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ವಿವರಿಸಿ ಹೇಳುವುದಕ್ಕೆ ಯಾರಿಂದಲೂ ಆಗಲಿಲ್ಲ” ಎಂದನು. PEPS
|
25. ಯೋಸೇಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳು ಒಂದೇಯಾಗಿದೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.
|
27. ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.
|
30. ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.
|
32. ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು. PEPS
|
33. “ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು.
|
34. ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು.
|
35. ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ.
|
36. ಆ ಆಹಾರ ಪದಾರ್ಥಗಳನ್ನು ಶೇಖರಿಸಿಕೊಳ್ಳುವುದರಿಂದ ಐಗುಪ್ತ ದೇಶದಲ್ಲಿ ಉಂಟಾಗುವ ಏಳು ವರ್ಷಗಳ ಬರಗಾಲದಲ್ಲಿ ಜನರು ಸಾಯುವುದಿಲ್ಲ” ಎಂದು ಹೇಳಿದನು. PEPS
|
38. ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು. PEPS
|
39. ಫರೋಹನು ಯೋಸೇಫನಿಗೆ, “ದೇವರು ಇದನ್ನೆಲ್ಲಾ ನಿನಗೆ ತಿಳಿಸಿರುವುದರಿಂದ ನಿನಗೆ ಸಮಾನನಾದ ಬುದ್ಧಿ, ವಿವೇಕವುಳ್ಳ ಪುರುಷನು ಯಾರೂ ಇಲ್ಲ.
|
40. ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು. PEPS
|
42. ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು.
|
43. ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು. PEPS
|
44. ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, “ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು” ಎಂದು ಹೇಳಿದನು.
|
45. ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು. PS
|
46. {ಏಳು ವರ್ಷ ಬರಗಾಲ} PS ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.
|
48. ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು.
|
49. ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು. PEPS
|
50. ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು.
|
51. ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, “ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು” ಎಂದು ಹೇಳಿ ಅವನಿಗೆ “ * ಮರೆತುಹೋಗುವಂತೆ ಮಾಡುವುದು. ಮನಸ್ಸೆ” ಎಂದು ಹೆಸರಿಟ್ಟನು.
|
52. ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಆ ಮಗನಿಗೆ “ † ಎರಡರಷ್ಟು ಅಭಿವೃದ್ಧಿ. ಎಫ್ರಾಯೀಮ್” ಎಂದು ಹೆಸರಿಟ್ಟನು. PEPS
|
54. ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.
|
55. ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು. PEPS
|
56. ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.
|
57. ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು. PE
|