1. {ಯೆಹೂದದ ಕುರಿತಾದ ನ್ಯಾಯತೀರ್ಪು} PS ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ
ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು. |
3. ಪಂಚಾಶತಾಧಿಪತಿ, ಘನವಂತನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರೆಲ್ಲರನ್ನು ತೊಲಗಿಸಿಬಿಡುವೆನು.
|
5. ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು,
ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು. |
6. ಆ ದಿನದಲ್ಲಿ ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು,
‘ನಿನಗೆ ನಿಲುವಂಗಿ ಇದೆ. ನೀನು ನಮಗೆ ಒಡೆಯನಾಗಬೇಕು. ಹಾಳಾದ ಈ ಪಟ್ಟಣವು ನಿನ್ನ ಕೈಕೆಳಗಿರಲಿ ತಂದೆಯ ಮನೆಯೊಳಗೆ ಅಣ್ಣನನ್ನು ಬಲವಂತ ಮಾಡಲು ಅಣ್ಣನು ದೇಶದ ನಿರರ್ಥಕ ವ್ರಣವೈದ್ಯನಾಗುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ನಿರಾಕರಿಸುವನು. |
7. ಆ ದಿನದಲ್ಲಿ ಅವನು ಗಟ್ಟಿಯಾಗಿ ಕೂಗುತ್ತಾ,
‘ನಾನು ನಿಮ್ಮನ್ನು ಸ್ವಸ್ಥಪಡಿಸುವುದಿಲ್ಲ. ನನ್ನ ಮನೆಯಲ್ಲಿ ಅನ್ನವಾಗಲೀ, ವಸ್ತ್ರವಾಗಲೀ ಇಲ್ಲ: ಜನರನ್ನು ಆಳುವ ಒಡೆಯನನ್ನಾಗಿ ನನ್ನನ್ನು ಮಾಡಬೇಡಿರಿ’ ” ಎಂದು ಹೇಳುವನು. |
8. ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು.
ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ? |
9. ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ.
ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ. |
12. ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು.
ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ. |
14. ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು.
ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ. |
15. ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?”
ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು. PS |
16. {ಯೆರೂಸಲೇಮಿನವರಿಗಾಗುವ ದಂಡನೆಯೂ} PS ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ,
ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ, |
24. ಆಗ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ,
ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು. |