1. {ಯೆಹೋವನು ಕೋರೆಷನನ್ನು ಕರೆದ ಉದ್ದೇಶ} PS ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು,
ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ, |
2. “ನಾನು ನಿನ್ನ ಮುಂದೆ ಹೋಗಿ, ದಿಣ್ಣೆಗಳನ್ನು ಸಮಮಾಡುವೆನು.
ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು. |
3. ನಿನ್ನ ಹೆಸರು ಹಿಡಿದು ಕರೆಯುವ ಯೆಹೋವನು ನಾನೇ. ಇಸ್ರಾಯೇಲರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ
ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಯನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು. |
4. ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದುಕೊಂಡ ಇಸ್ರಾಯೇಲಿಗಾಗಿ
ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಬಿರುದನ್ನು ದಯಪಾಲಿಸಿದ್ದೇನೆ. |
5. ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ.
ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು. |
7. ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು,
ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು. |
8. ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು.
ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು. |
9. {ದೇವರ ಮೇಲೆ ಗುಣುಗುಟ್ಟುವವರನ್ನು ಖಂಡಿಸುವುದು} PS ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ!
ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ? |
10. ‘ನೀನು ಹುಟ್ಟಿಸುವುದೇನು’ ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ‘ನೀನು ಹೆರುವುದೇನು’ ಎಂದು ಸ್ತ್ರೀಯನ್ನು ಕೇಳುವವನ ಗತಿ ಗತಿಯೇ!
|
11. ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ,
‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ. |
12. ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ.
ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ. |
13. ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು.
ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು’ ” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ. |
14. {ಆಫ್ರಿಕ ಖಂಡದ ಕೆಲವು ಜನಾಂಗಗಳು ಇಸ್ರಾಯೇಲಿಗೆ ಅಧೀನವಾಗುವುದು} PS ಯೆಹೋವನ ಈ ಮಾತನ್ನು ಕೇಳಿರಿ,
“ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’ ” |
17. ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು.
ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ. |
18. {ಯೆಹೋವನು ದಿಗಂತಗಳವರನ್ನು ತನ್ನ ಕಡೆಗೆ ಕರೆಯುವುದು} PS ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು.
ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ. |
19. ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ.
ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ. |
20. ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ!
ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ. |
21. ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ.
ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ. |
22. ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ.
ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ. |
23. ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ,
ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು. |
24. ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು.
ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು. |
25. ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ. PE
|