1. {ಚೀಯೋನಿಗೆ ಶಾಶ್ವತವಾದ ರಕ್ಷಣೆ} PS ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ,
ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ. |
2. ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ
ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು. |
3. ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ,
ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು. |
4. “ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ!
ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು. |
5. ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು,
ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು. |
6. ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ.
ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ. |
7. ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ,
ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. |
8. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು.
ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.” |
9. ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ!
ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು * ರಹಬನ್ನು ಕಾನಾನ್ಯರ ಪುರಾಣದಲ್ಲಿ ರಹಾಬ ಎಂಬುದು ಸೃಷ್ಟಿಯಲ್ಲಿ ಸ್ಥಾಪಿಸಲಾದ ವ್ಯವಸ್ಥೆಯಿಂದ ಅಸ್ತವ್ಯಸ್ತ ಸ್ಥಿತಿಗೆ ಮರಳಿ ಕೊಂಡ್ಯೊಯುವ ಬೆದರಿಕೆಯನ್ನೊಡುವ ನೀರನ್ನು ಸೂಚಿಸುತ್ತದೆ. ಇದು ಸಮುದ್ರ ಮತ್ತು ಘಟಸರ್ಪಕ್ಕೆ ಸಂಬಂಧಿಸಿದ್ದಾಗಿದೆ. ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ? |
10. ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ,
ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದವನು ನೀನಲ್ಲವೋ? |
11. ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು.
ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು. |
12. ನಾನೇ, ನಾನೇ ನಿನ್ನನ್ನು ಸಂತೈಸುವವನು.
ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು? |
13. ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ?
ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ? |
14. ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು,
ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ. |
15. ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ,
ಸೇನಾಧೀಶ್ವರನಾದ ಯೆಹೋವನೆಂಬುದೇ ನನ್ನ ನಾಮಧೇಯ. |
16. ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ,
ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ. |
17. {ಯೆಹೋವನ ರೋಷ ಪಾತ್ರೆ} PS ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ,
ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ. |
18. ಅವಳು ಹೆತ್ತ ಮಕ್ಕಳಲ್ಲಿ ಅವಳನ್ನು ನಡೆಸಿಕೊಂಡು ಹೋಗುವವನು ಯಾರೂ ಇಲ್ಲ.
ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ. |
19. ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ?
ನಾಶವೋ, ಸಂಹಾರವೋ, ಕ್ಷಾಮವೋ, ಶಕ್ತಿಯೋ. ನಾನು ನಿನ್ನನ್ನು ಹೇಗೆ ಸಂತೈಸಲಿ? |
20. ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ.
ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ. |
22. ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ,
“ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ. |
23. ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು.
ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.” PE |