1. {ಯೆಹೂದ್ಯರ ದ್ರೋಹ} PS ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,
|
2. ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇಮಿನವರಿಗೂ ಸಾರಿದನು. PEPS
|
3. ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.
|
4. ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
|
5. ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.
|
6. ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ.
|
7. ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ” ಎಂದು ಹೇಳಿದನು. PS
|
8. {ಎಪ್ಪತ್ತು ವರ್ಷಗಳ ಸೆರೆ} PS ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ, “ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ,
|
9. ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.
|
10. ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.
|
11. ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.
|
12. ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.
|
13. ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.
|
14. ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು” ಎಂಬುದೇ. PS
|
15. {ಯೆಹೋವನು ವಿಧಿಸುವ ದುರ್ಗತಿ} PS ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.
|
16. ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು” ಎಂದು ಅಪ್ಪಣೆಕೊಟ್ಟನು.
|
17. ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ, ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು.
|
18. ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.
|
20. ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಹಾಳಾಗದೆ ಉಳಿದ ಸ್ವಲ್ಪ ಅಷ್ಡೋದ್,
|
26. ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ * ಶೇಷಕಿನ ಬಾಬೆಲಿನ ರಹಸ್ಯವಾದ ಹೆಸರು. ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ.
|
27. ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”
|
28. ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ, ಕುಡಿಯಲಿಕ್ಕೂ ಕೇಳದಿದ್ದರೆ ನೀನು ಅವರಿಗೆ ಹೀಗೆ ಹೇಳು, “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನೀವು ಕುಡಿಯಲೇ ಬೇಕು.
|
29. ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.
|
30. ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು,
“ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು. |
31. ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು,
ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ. |
32. {ಜನಾಂಗಕ್ಕೆ ಬರುವ ಕೇಡು} PS ಸೇನಾಧೀಶ್ವರನಾದ ಯೆಹೋವನು, “ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು.
|
33. ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು;
ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರು ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು. |
34. {ಯೆಹೂದ್ಯ ನಾಯಕರಿಗಾಗುವ ಶಿಕ್ಷೆ} PS ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ!
ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ. |
38. ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ.
ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ. PE |