1. ಯೆಹೋವನು, “ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ;
ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ. |
2. ‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ,
ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ. PS |
3. {ಯೆಹೂದಕ್ಕೆ ಉತ್ತರ ದಿಕ್ಕಿನಿಂದ ಬರುವ ಕ್ರೂರ ದಂಡನೆ} PS ಯೆಹೋವನು ಯೆಹೂದದವರಿಗೂ ಮತ್ತು ಯೆರೂಸಲೇಮಿನವರಿಗೂ, “ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.
|
4. ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ. PEPS
|
5. ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.
|
6. ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಉತ್ತರ ದಿಕ್ಕಿನಿಂದ ವಿಪತ್ತನ್ನು ಮತ್ತು ಘೋರನಾಶವನ್ನು ಬರಮಾಡುವೆನು.
|
7. ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.
|
8. ಇದರ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.
|
9. ಆ ಕಾಲದಲ್ಲಿ ಅರಸನ ಎದೆಯು ಕುಂದುವುದು, ಅಧಿಪತಿಗಳ ಹೃದಯವು ಕುಗ್ಗುವುದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು” ಎಂದು ಯೆಹೋವನು ನುಡಿಯುತ್ತಾನೆ. PEPS
|
10. ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ” ಅಂದೆನು.
|
11. ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.
|
12. ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು” ಎಂಬುದೇ. PEPS
|
13. ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.
|
14. ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?
|
16. ಇಗೋ, ಜನಾಂಗಗಳಿಗೆ ಅರುಹಿರಿ, “ಮುತ್ತುವವರು ದೂರದೇಶದಿಂದ ಯೆರೂಸಲೇಮಿಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿ ಎತ್ತುತ್ತಾರೆ” ಎಂದು ಪ್ರಚುರಪಡಿಸಿರಿ.
|
18. ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ. PEPS
|
19. ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.
|
20. ನಾಶದ ಮೇಲೆ ನಾಶವು, ಒಂದರ ಮೇಲೊಂದು ನಾಶದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು.
|
22. ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು. PS
|
23. {ಬರಲಿರುವ ವಿನಾಶದ ದೃಶ್ಯ} PS ನಾನು ದಿವ್ಯಜ್ಞಾನದಿಂದ ನೋಡಿದೆನು, ಆಹಾ! ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.
|
26. ನಾನು ನೋಡಲಾಗಿ ಫಲವತ್ತಾದ ಭೂಮಿಯು ಕಾಡಾಗಿತ್ತು, ಅಯ್ಯೋ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದುಹೋಗಿದ್ದವು.
|
28. ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.
|
29. ಪಟ್ಟಣದವರೆಲ್ಲರೂ ಸವಾರರ ಮತ್ತು ಬಿಲ್ಲುಗಾರರ ಆರ್ಭಟಕ್ಕೆ ಹೆದರಿ ಓಡುತ್ತಾರೆ; ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ, ಅತ್ತ ಬಂಡೆಗಳನ್ನು ಹತ್ತುತ್ತಾರೆ; ಪ್ರತಿಯೊಂದು ಪಟ್ಟಣವು ಯಾವ ನಿವಾಸಿಯೂ ಇಲ್ಲದೆ ನಿರ್ಜನವಾಗುತ್ತದೆ.
|
30. ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.
|
31. ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ” ಎಂದು ಅರಚಿಕೊಳ್ಳುತ್ತಾಳೆ. PE
|