1. ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.
|
2. ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.
|
3. ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.
|
4. {ಯೆಹೂದ್ಯರ ದುಷ್ಟತನಕ್ಕೆ ಅದ ಭಂಗ} PS ನೀನು ಅವರಿಗೆ ಹೀಗೆ ಹೇಳಬೇಕು, “ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ?
|
5. ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.
|
6. ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.
|
7. ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.
|
8. ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.
|
10. ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು.
ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ. |
12. ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ.
ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ. |
13. ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.
|
14. ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ.
ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ. |
16. ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ.
ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು. |
17. ಅದಕ್ಕೆ ಯೆಹೋವನು, “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು” ಎಂದು ನುಡಿದಿದ್ದಾನೆ.
|
18. {ಕುಗ್ಗಿದ ಹೃದಯದಿಂದ ಮೊರೆಯಿಡುವ ಯೆರೆಮೀಯನು} PS ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.
|
19. ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ.
ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ. |