1. ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು!
ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ! |
2. ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು!
ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ. |
3. {ಯೆರೆಮೀಯನಿಗೆ ಯೆಹೋವನ ಉತ್ತರ} PS ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ.
ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ. |
4. ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ.
ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು. |
5. ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ.
ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ. |
6. ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ.
|
7. ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.
|
8. ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ;
ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ. |
9. ನಾನು ಅವರನ್ನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?” ಎಂದು ನುಡಿಯುತ್ತಾನೆ.
|
10. “ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.
|
11. ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು
ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ. |
12. {ದೇಶವು ಸುಟ್ಟು ಹೋಗುವುದಕ್ಕೆ ಕಾರಣ} PS ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ?
ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು? |
13. ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು.
|
14. ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.
|
16. ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ.
|
17. {ಯೆರೂಸಲೇಮಿನ ಶೋಕಗೀತೆ} PS ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.
|
18. ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆಹೊರಡುವಂತೆಯೂ, ನಮ್ಮ ಕಣ್ಣುಗಳಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳಾಡಲಿ.
|
19. ‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’ ” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.
|
20. ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ.
ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ; |
21. ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ.
|
22. “ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.
|
23. {ಯೆಹೋವನಲ್ಲಿ ಹೆಚ್ಚಳಪಡುವುದು} PS ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.
|
24. ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ. PEPS
|
25. “ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ.
|
26. ಏಕೆಂದರೆ ಸಕಲ ಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ನುಡಿಯುತ್ತಾನೆ. PE
|