1. {ಎಲೀಹುವಿನ ಅಂತಿಮ ಸಂಭಾಷಣೆ} [PS] ಆಮೇಲೆ ಎಲೀಹು ಮತ್ತೆ ಹೀಗೆಂದನು, [QBR]
2. “ಸ್ವಲ್ಪ ತಾಳು, ನಾನು ತಿಳಿಸುತ್ತೇನೆ, [QBR] ದೇವರ ಪರವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವು ಉಂಟು. [QBR]
3. ದೂರದಿಂದ ಸಂಪಾದಿಸಿದ ನನ್ನ ತಿಳಿವಳಿಕೆಯ ಪ್ರಕಾರ, [QBR] ನನ್ನ ಸೃಷ್ಟಿಕರ್ತನನ್ನು ಧರ್ಮಸ್ವರೂಪನೆಂದು ಹೊಗಳುವೆನು. [QBR]
4. ನನ್ನ ಮಾತುಗಳು ಸುಳ್ಳಲ್ಲವೆಂಬುದು ನಿಶ್ಚಯ, [QBR] ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ. [QBR]
5. ಇಗೋ, ದೇವರು ಮಹಾಶಕ್ತನಾಗಿದ್ದರೂ ಯಾರನ್ನೂ ತಿರಸ್ಕರಿಸುವುದಿಲ್ಲ, [QBR] ಆತನ ಬುದ್ಧಿ ಸಾಮರ್ಥ್ಯವು ಅಪಾರವಾಗಿದೆ. [QBR]
6. ಆತನು ದುಷ್ಟರ ಪ್ರಾಣವನ್ನು ಉಳಿಸುವುದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು. [QBR]
7. ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ, [QBR] ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕುಳಿತುಕೊಳ್ಳುವ, [QBR] ಉನ್ನತಪದವಿಗೆ ಅವರನ್ನು ತರುವನು. [QBR]
8. ಅವರು ಒಂದು ವೇಳೆ ಬಂಧನಕ್ಕೆ ಸಿಕ್ಕಿಕೊಂಡು, [QBR] ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ, [QBR]
9. ಆತನು ಅವರ ದುಷ್ಕೃತ್ಯವನ್ನೂ, [QBR] ಸೊಕ್ಕಿನ ದ್ರೋಹಗಳನ್ನೂ ಅವರಿಗೆ ತೋರಿಸುವನು. [QBR]
10. ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಗಳನ್ನು ತೆರೆದು, [QBR] ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು. [QBR]
11. ಅವರು ಅದನ್ನು ಕೇಳಿ ಆತನನ್ನು ಸೇವಿಸಿದರೆ, [QBR] ತಮ್ಮ ದಿನಗಳನ್ನು ಸುಖದಲ್ಲಿಯೂ, [QBR] ವರ್ಷಗಳನ್ನು ಸಂತೋಷದಲ್ಲಿಯೂ ಕಳೆಯುವರು. [QBR]
12. ಕೇಳದಿದ್ದರೆ ದೈವಾಸ್ತ್ರದಿಂದ ಅಳಿದುಹೋಗುವರು, [QBR] ಜ್ಞಾನಹೀನರಾಗಿಯೇ ಪ್ರಾಣಬಿಡುವರು. [QBR]
13. [* ಅಥವಾ ಕಪಟ ಹೃದಯಿಗಳು.] ದೇವರನ್ನು ಹೃದಯದಲ್ಲಿ ನಂಬದಿರುವವರು ಸಿಟ್ಟುಗೊಂಡಿರುವರು, [QBR] ಆತನು ಅವರನ್ನು ಬಂಧಿಸುವಾಗಲೂ ಆತನಿಗೆ ಮೊರೆಯಿಡುವುದಿಲ್ಲ. [QBR]
14. ಯೌವನದಲ್ಲೇ ಸಾಯುವರು. [QBR] ಅವರ ಜೀವವು ಪುರಷಗಾಮಿಗಳ ಜೀವದಂತೆ ಕ್ಷಯಿಸುವುದು. [QBR]
15. ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, [QBR] ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು. [QBR]
16. ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ, [QBR] ಇಕ್ಕಟ್ಟಿಲ್ಲದ ವಿಶಾಲ ಸ್ಥಳಕ್ಕೆ ಬರಮಾಡಬೇಕೆಂದೂ, [QBR] ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬುದು ಆತನ ಉದ್ದೇಶವಾಗಿದೆ. [QBR]
17. ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ, [QBR] ನ್ಯಾಯವಿಚಾರಣೆಗೂ, ನ್ಯಾಯತೀರ್ಪಿಗೂ ಒಳಗಾಗಿದ್ದಿ. [QBR]
18. ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕದಂತೆ ನೋಡಿಕೋ! [QBR] ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ! [QBR]
19. ಕಷ್ಟಾನುಭವವಿಲ್ಲದೆ ನಿನ್ನ ಐಶ್ವರ್ಯವೂ, [QBR] ಧನಸಾಮರ್ಥ್ಯವೂ ನಿನಗೆ ಈಡಾಗುವುದೇ? [QBR]
20. ಜನಾಂಗಗಳು ತಟ್ಟನೆ ನಿರ್ಮೂಲವಾಗುವಾಗ ಅವರ ವಿರುದ್ಧ ಪಾಪಮಾಡದಂತೆ, [QBR] ರಾತ್ರಿಯನ್ನು ಬಯಸಬೇಡ. [QBR]
21. ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಡಬೇಡ. [QBR] ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದಿ. [QBR]
22. ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತ ಕಾರ್ಯಗಳನ್ನು ನಡೆಸುವನು, [QBR] ಆತನಂತಹ ಉಪದೇಶಕನು ಯಾರು? [QBR]
23. ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು? [QBR] ‘ನೀನು ಅನ್ಯಾಯವನ್ನು ನಡೆಸಿದಿ’ ಎಂದು ಯಾರು ಹೇಳಬಲ್ಲರು? [QBR]
24. ಮನುಷ್ಯರು ಕೀರ್ತಿಸುವ, [QBR] ಆತನ ಕೆಲಸವನ್ನು ಹೊಗಳಲು ಮರೆಯಬೇಡ. [QBR]
25. ಎಲ್ಲಾ ಮನುಷ್ಯರೂ ಅದನ್ನು ಕಂಡಿದ್ದಾರೆ; [QBR] ಆದರೆ ನರನು ದೂರದಿಂದ ನೋಡುತ್ತಾನಷ್ಟೆ. [QBR]
26. ಆಹಾ, ದೇವರು ಮಹೋನ್ನತನಾಗಿದ್ದಾನೆ, [QBR] ನಾವು ಆತನನ್ನು ಅರಿಯಲಾರೆವು; ಆತನ ವರ್ಷಗಳು ಅಸಂಖ್ಯಾತವಾಗಿವೆ. [QBR]
27. ನೀರಿನ ಹನಿಗಳನ್ನು ಎಳೆದುಕೊಳ್ಳುವನು, [QBR] ಅವು ತಿಳಿಮಳೆಯಾಗಿ ಆತನ ಮಂಜಿನಿಂದ ಉದುರುವವು. [QBR]
28. ಮೋಡಗಳು ಅದನ್ನು ಸುರಿಸಿ [QBR] ಸಮೃದ್ಧಿಯಾಗಿ ಜನರ ಮೇಲೆ ಚಿಮುಕಿಸುವುದು. [QBR]
29. ಆಹಾ, ಮೇಘಗಳ ಹರಡುವಿಕೆಯನ್ನೂ, [QBR] ಆತನ ಗುಡಾರದಲ್ಲಿನ ಗರ್ಜನೆಗಳನ್ನೂ ಯಾರು ಗ್ರಹಿಸಬಲ್ಲರು? [QBR]
30. ಇಗೋ, ತನ್ನ ಪ್ರಕಾಶವನ್ನು ಸುತ್ತಲು ಹರಡಿಕೊಂಡು, [QBR] ಅದನ್ನು ಜಲಸಮೂಹಗಳಿಂದ ಮುಚ್ಚಿಕೊಳ್ಳುವನು. [QBR]
31. ಮೋಡಗಳ ಮುಖಾಂತರವಾಗಿಯೇ ಜನಾಂಗಗಳಿಗೆ ನ್ಯಾಯವನ್ನು ವಿಧಿಸಿ, [QBR] ಆಹಾರವನ್ನು ಧಾರಾಳವಾಗಿ ದಯಪಾಲಿಸುವನಷ್ಟೆ. [QBR]
32. ಕೈತುಂಬಾ ಸಿಡಿಲನ್ನು ಹಿಡಿದು [QBR] ನೀನು ವೈರಿಯನ್ನು ಹೊಡೆದು ಗುರಿಮುಟ್ಟುಲು ಬಿಡುವನು. [QBR]
33. ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವುದು, [QBR] ದನಕರುಗಳೂ ಸಹ ಆತನ ಆಗಮನವನ್ನು ತಿಳಿಯುವವು.” [PE]