1. {ಮರಿಯಳು ಸುಗಂಧ ತೈಲವನ್ನು ಯೇಸುವಿನ ಪಾದಕ್ಕೆ ಹಚ್ಚಿದ್ದು} PS * ಮತ್ತಾ 26:6-12; ಮಾರ್ಕ 14:3-8: ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.
|
2. ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು.
|
3. ಆಗ ಮರಿಯಳು ಬಹು ಬೆಲೆಯುಳ್ಳ † ಸುಗಂಧದ್ರವ್ಯ, ನಾರ್ಡೊಸ್ಟಾಕಿಸ್ ಎಂಬ ಮೂಲಿಕೆಯಿಂದ ತಯಾರಿಸಲಾಗಿದೆ. ಸ್ವಚ್ಛ ಜಟಮಾಂಸಿ ತೈಲವನ್ನು ‡ ಸುಮಾರು ಅರ್ಧ ಲೀಟರಿನಷ್ಟು. ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.
|
6. ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.
|
7. ಆಗ ಯೇಸುವು, “ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ.
|
8. ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ” ಎಂದನು. PEPS
|
9. ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು.
|
12. {ಯೇಸು ಯೆರೂಸಲೇಮಿನಲ್ಲಿ ಅರಸನಂತೆ ಪ್ರವೇಶಿಸಿದ್ದು} (ಮತ್ತಾ 21:4-9; ಮಾರ್ಕ 11:7-10; ಲೂಕ 19:35-38) PS ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ
|
13. ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, § ಮೂಲ: ಹೊಸನ್ನ, ಎಂದರೆ “ದೇವರು ನಮ್ಮನ್ನು ರಕ್ಷಿಸಲಿ” ಎಂದರ್ಥ. BR ಕೀರ್ತ 118:25, 26: “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.
|
15. ಹೀಗೆ, * ಜೆಕ. 9:9: “ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು.
|
16. ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.
|
17. ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು.
|
19. ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. PS
|
20. {ಗ್ರೀಕರಿಗೂ ಯೇಸುವನ್ನು ಕಾಣುವ ಬಯಕೆ} PS ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.
|
21. ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.
|
24. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು
|
25. ‡ ಮತ್ತಾ 10:39; 16:25; ಮಾರ್ಕ 8:35; ಲೂಕ 9:24; 17:33: ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
|
26. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
|
27. ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?
|
28. ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.
|
29. ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು.
|
31. § ಯೋಹಾ 16:11: ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. * ಲೂಕ 10:18; ಎಫೆ 2:2: ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು
|
32. ಆದರೆ † ಯೋಹಾ 3:14; 8:28: ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.
|
34. ಅದಕ್ಕೆ ಆ ಜನರು, ‡ ಕೀರ್ತ 89:36, 37; 110:4: “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.
|
35. ಆಗ ಯೇಸು ಅವರಿಗೆ, § ಯೋಹಾ 12:46; ಎಫೆ 5:8; ಯೆರೆ 13:16: “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
|
36. ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು. PS
|
38. ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, * ಯೆಶಾ 53:1: “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ † ಅಥವಾ, ತೋಳು. ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.
|
40. ‡ ಯೆಶಾ 6:9, 10: “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.
|
42. ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.
|
44. ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ.
|
47. ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.
|
48. ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.
|
49. ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ.
|
50. ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು. PE
|