1. {ಯೇಸು ಸಬ್ಬತ್ ದಿನದಲ್ಲಿ ಒಬ್ಬ ರೋಗಿಯನ್ನು ಸ್ವಸ್ಥಮಾಡಿದ್ದರಿಂದ ಯೆಹೂದ್ಯರು ಆತನನ್ನು ವಿರೋಧಿಸಿದ್ದು} PS ಇದಾದ ಮೇಲೆ ಯೆಹೂದ್ಯರ ಒಂದು * ಅಥವಾ, ಹಬ್ಬ. ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು.
|
2. ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ † ಕೆಲವು ಪ್ರತಿಗಳಲ್ಲಿ ಬೇತ್ಸಾಯಿದವೆಂದು, ಬೇರೆ ಕೆಲವು ಪ್ರತಿಗಳಲ್ಲಿ ಬೇಥೆಸ್ಥ ಎಂದು ಬರೆದಿದೆ. ಬೇತ್ಸಥಾ ಎಂದು ಕರೆಯುತ್ತಾರೆ.
|
3. 3-4 ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ‡ ಕೆಲವು ಪ್ರತಿಗಳಲ್ಲಿ ಈ ಭಾಗವು ಕಂಡುಬರುವುದಿಲ್ಲ (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.)
|
6. ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು.
|
7. ಅದಕ್ಕೆ ಆ ರೋಗಿಯು “ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ” ಎಂದನು.
|
10. ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ,
|
13. ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮಧ್ಯದಲ್ಲಿ ಮರೆಯಾದನು.
|
14. ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; § ಯೋಹಾ 8:11: ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.
|
16. ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.
|
17. ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.
|
18. ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು. PS
|
19. {ದೇವಕುಮಾರನ ಅಧಿಕಾರವನ್ನು ಮತ್ತು ಆತನಿಗಿರುವ ಸಾಕ್ಷಿಯನ್ನು ಕುರಿತು ಯೇಸು ಮಾಡಿದ ಉಪದೇಶ} PS ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ.
|
20. ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.
|
23. ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.
|
24. ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.
|
25. ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.
|
28. ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ * ದಾನಿ. 12:2; ಪ್ರಕ 20:4,5,12,13: ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ,
|
29. ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು. PEPS
|
30. “ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.
|
32. ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
|
34. ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.
|
35. ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.
|
36. ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
|
37. ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ.
|
39. † ಲೂಕ 24:27, 44-47; ಅ. ಕೃ. 17:11: ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.
|
43. ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ.
|
44. ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?
|
45. ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ!
|
47. ಅವನು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬುವಿರಿ?” ಎಂದನು. PE
|