1. {ಗುಡಾರಗಳ ಹಬ್ಬದಲ್ಲಿ ಯೇಸುವಿನ ಉಪದೇಶ} PS ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ.
|
3. ಆದುದರಿಂದ ಆತನ ಸಹೋದರರು ಆತನಿಗೆ “ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು.
|
4. ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ” ಎಂದು ಹೇಳಿದರು.
|
7. ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.
|
8. ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ” ಎಂದು ಹೇಳಿದನು.
|
12. ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು.
|
15. ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.
|
16. ಅದಕ್ಕೆ ಯೇಸು ‡ ಯೋಹಾ 3:34; 8:28; 12:49; 14:10, 24: “ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ.
|
17. ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.
|
18. ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.
|
19. ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?” ಎಂದು ಕೇಳಿದನು.
|
22. * ಯಾಜ 12:3: ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ, † ಆದಿ 17:10: ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.
|
23. ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?
|
26. ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?
|
27. ಆದರೆ ಇವನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು, ಕ್ರಿಸ್ತನು ಬರುವಾಗ ಆತನು ಎಲ್ಲಿಂದ ಬಂದವನೆಂದು ಒಬ್ಬರಿಗೂ ತಿಳಿಯುವುದಿಲ್ಲವೆಂದು ಮಾತನಾಡಿಕೊಳ್ಳುತ್ತಿದ್ದರು.”
|
28. ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.
|
29. ಆದರೆ ನಾನು ಆತನನ್ನು ಬಲ್ಲೆನು ಏಕೆಂದರೆ, ನಾನು ಆತನ ಕಡೆಯಿಂದ ಬಂದವನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಕೂಗಿ ಹೇಳಿದನು.
|
30. ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
|
31. ಜನರಲ್ಲಿ ಅನೇಕರು ಆತನನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?” ಎಂದು ಹೇಳಿದರು. PS
|
32. {ಅಧಿಕಾರಿಗಳು ಆತನನ್ನು ಹಿಡಿಯುವುದಕ್ಕೆ ಪ್ರಯತ್ನಮಾಡಿದ್ದು} PS ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು.
|
33. ಆಗ ಯೇಸು ಅವರಿಗೆ ‡ ಯೋಹಾ 12:35; 16, 5, 16: “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.
|
34. § ಯೋಹಾ 8:21: ನೀವು ನನ್ನನ್ನು ಹುಡುಕುವಿರಿ, ಆದರೆ ಕಂಡುಕೊಳ್ಳದೆ ಹೋಗುವಿರಿ. ನಾನು ಇರುವಲ್ಲಿಗೆ ನೀವು ಬರಲಾರಿರಿ” ಎಂದನು.
|
35. ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?
|
36. ‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ ಮತ್ತು ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎಂದು ಹೇಳಿದ ಮಾತಿನ ಅರ್ಥ ಏನಾಗಿರಬಹುದು?” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು. PEPS
|
37. ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು * ಯೆಶಾ 55:1; ಯೋಹಾ 4:14; 6:35: “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
|
38. ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು.
|
39. ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.
|
42. † ಯೆರೆ 23:5; ಮೀಕ. 5:2: ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.
|
45. ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಕರೆತರಲಿಲ್ಲ?” ಎಂದು ಅವರನ್ನು ಕೇಳಿದ್ದಕ್ಕೆ,
|
51. ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ,
|
52. ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು. PEPS
|