1. {ಯೇಸು ಎಪ್ಪತ್ತು ಮಂದಿ ಶಿಷ್ಯರನ್ನು ಕಳುಹಿಸಿದ್ದು} PS ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು * ಕೆಲವು ಪ್ರತಿಗಳಲ್ಲಿ ಎಪ್ಪತ್ತೆರಡು ಎಂದು ಬರೆಯಲಾಗಿದೆ. ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.
|
2. ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ.
|
4. ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.
|
6. ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು.
|
7. ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.
|
8. ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.
|
11. ‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.
|
13. ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.
|
16. ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು. PEPS
|
17. ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.
|
19. ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
|
20. ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು. PEPS
|
21. ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
|
22. ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.
|
23. ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು.
|
24. ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು. PS
|
25. {ಒಳ್ಳೆಯ ಸಮಾರ್ಯದವನ ಸಾಮ್ಯ} PS ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,
|
27. ಅದಕ್ಕೆ ಅವನು, “ ‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.
|
28. ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು.
|
29. ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,
|
30. ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.
|
34. ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.
|
35. ಮರುದಿನ ಅವನು ಎರಡು ದಿನಾರಿಗಳನ್ನು † ಒಂದು ದಿನಾರಿ ಅಂದರೆ ಒಂದು ಬೆಳ್ಳಿ ನಾಣ್ಯ. ಅದು ಒಂದು ದಿನದ ಕೂಲಿಗೆ ಸಮವಾಗಿದೆ. ತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.
|
36. ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?” ಎಂದು ಕೇಳಿದ್ದಕ್ಕೆ,
|
37. ಆ ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು. PS
|
38. {ಮಾರ್ಥ ಮರಿಯಳು ಎಂಬುವರ ಮನೆಯಲ್ಲಿ ಯೇಸು ಇಳುಕೊಂಡದ್ದು} PS ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.
|
39. ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.
|
40. ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.
|
41. ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.
|
42. ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು. PE
|