1. {ಯೇಸು ಕ್ರಿಸ್ತನ ಜನನವೂ} PS ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.
|
4. (4-5) ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.
|
7. ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು. PS
|
8. {ದೇವದೂತರು ಯೇಸುವಿನ ಜನನವನ್ನು ಕುರುಬರಿಗೆ ತಿಳಿಸಿದ್ದು} PS ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರಿಹಿಂಡನ್ನು ಕಾಯುತ್ತಿರಲಾಗಿ,
|
9. ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು.
|
10. ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.
|
11. ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.
|
12. ಅದರ ಗುರುತೇನಂದರೆ, ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ” ಎಂದು ಹೇಳಿದನು.
|
13. (13-14) ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು,
“ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು. PEPS |
15. ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು, “ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡಲು ಹೋಗೋಣ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು,
|
20. ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು. PS
|
21. {ಯೇಸುವಿನ ನಾಮಕರಣ ಮತ್ತು ಆತನನ್ನು ದೇವಾಲಯದಲ್ಲಿ ದೇವರಿಗೆ ಸಮರ್ಪಿಸಿದ್ದು} PS ಆ ಕೂಸಿಗೆ ಸುನ್ನತಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು. PEPS
|
22. (22-23) ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು.
|
24. ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು “ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ” ಬಲಿಕೊಡಬೇಕಾಗಿತ್ತು.
|
25. ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.
|
26. ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.
|
27. ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಆಗ ತಂದೆತಾಯಿಗಳು ಮಗುವಾದ ಯೇಸುವನ್ನು ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡೆಸಬೇಕೆಂದು ಮಗುವನ್ನು ಒಳಕ್ಕೆ ತರಲು,
|
34. ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;
|
35. ಹೀಗೆ ಬಹುಜನರ ಹೃದಯದ ಆಲೋಚನೆಗಳು ಬಹಿರಂಗವಾಗುವವು; ಈ ಕಾರಣಕ್ಕಾಗಿ ಈತನು ಹುಟ್ಟಿದ್ದು. ಇದಲ್ಲದೆ ನಿನ್ನ ಸ್ವಂತ ಮನಸ್ಸಿಗಂತೂ ಅಲಗು ನಾಟಿದಂತೆ ವೇದನೆ ಉಂಟಾಗುತ್ತದೆ” ಎಂದು ಹೇಳಿದನು. PEPS
|
36. ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು,
|
37. ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು.
|
38. ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.
|
39. ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು. PEPS
|
41. {ಬಾಲಕನಾದ ಯೇಸು ದೇವಾಲಯದಲ್ಲಿ ವಿದ್ವಾಂಸರೊಂದಿಗೆ ಸಂಭಾಷಿಸಿದ್ದು} PS ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕ ಹಬ್ಬಕ್ಕೆ ಯೆರೂಸಲೇಮಿಗೆ ಹೋಗುತ್ತಿದ್ದರು.
|
43. ಹಬ್ಬದ ದಿನಗಳನ್ನು ಮುಗಿಸಿಕೊಂಡು ಹಿಂತಿರುಗಿ ಬರುವಾಗ ಬಾಲಕನಾದ ಯೇಸು ಯೆರೂಸಲೇಮಿನಲ್ಲಿಯೇ ಉಳಿದುಕೊಂಡನು. ಅವನ ತಂದೆತಾಯಿಗಳು ಅದನ್ನು ತಿಳಿಯದೆ,
|
44. ಆತನು ಯಾತ್ರಿಕರ ಗುಂಪಿನಲ್ಲಿ ಸೇರಿರಬಹುದೆಂದು ಊಹಿಸಿ, ಒಂದು ದಿನದ ಪ್ರಯಾಣ ಮಾಡಿಬಿಟ್ಟಿದ್ದರು. ನಂತರ ಬಂಧುಬಾಂಧವರಲ್ಲಿಯೂ ಪರಿಚಿತರಲ್ಲಿಯೂ ಹುಡುಕಾಡಿ,
|
46. ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.
|
48. ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು, “ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ” ಎಂದು ಹೇಳಲು,
|
49. ಆತನು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದವನು ಎಂದು ನಿಮಗೆ ತಿಳಿಯಲಿಲ್ಲವೇ?” ಎಂದು ಕೇಳಿದನು.
|
51. ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು. PEPS
|
52. ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು. PE
|