1. {ಯೇಸು ಪ್ರಥಮ ಶಿಷ್ಯರನ್ನು ಆಯ್ಕೆ ಮಾಡಿಕೊಂಡದ್ದು} PS ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.
|
2. ಯೇಸು ಆ ಸರೋವರದ ದಡದಲ್ಲಿದ್ದ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
|
3. ಆ ದೋಣಿಗಳಲ್ಲಿ, ಸೀಮೋನನ ದೋಣಿಯನ್ನು ಯೇಸು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು.
|
4. ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ” ಎಂದು ಹೇಳಿದನು.
|
5. ಅದಕ್ಕೆ ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯತ್ನಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಬೀಸುತ್ತೇವೆ” ಅಂದನು.
|
6. ಅವರು ಬಲೆಗಳನ್ನು ಬೀಸಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಬಲೆಗೆ ಸಿಕ್ಕಿಕೊಂಡಿದ್ದರ ಪರಿಣಾಮ ಬಲೆಗಳು ಹರಿದುಹೋಗುವಂತ್ತಿದವು.
|
7. ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗುವ ಹಾಗಾದವು.
|
8. ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು. PEPS
|
10. ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ, “ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವ ಬೆಸ್ತನಾಗಿರುವಿ” ಎಂದು ಹೇಳಿದನು.
|
12. {ಯೇಸು ಕುಷ್ಠರೋಗಿಯನ್ನು ವಾಸಿಮಾಡಿದ್ದು} (ಮತ್ತಾ 8:1-4; ಮಾರ್ಕ 1:40-45) PS ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
|
14. ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು.
|
15. ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು.
|
17. {ಯೇಸು ಪಾರ್ಶ್ವವಾಯು ರೋಗಿಯನ್ನು ಗುಣಪಡಿಸಿದ್ದು} (ಮತ್ತಾ 9:1-8; ಮಾರ್ಕ 2:1-12) PS ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.
|
18. ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು.
|
19. ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು.
|
21. ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು. PEPS
|
22. ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು?
|
24. ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದು ಹೇಳಿದನು.
|
25. ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು.
|
26. ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು. PS
|
27. {ಯೇಸು ಲೇವಿಯನನ್ನು ಕರೆದದ್ದು} (ಮತ್ತಾ 9:9-13; ಮಾರ್ಕ 2:13-17) PS ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು,
|
29. ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.
|
30. ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.
|
32. ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ” ಎಂದು ಅವರಿಗೆ ಉತ್ತರಕೊಟ್ಟನು. PS
|
33. {ಉಪವಾಸದ ಕುರಿತಾದ ವಿಚಾರಣೆ} PS ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು,
|
35. ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು” ಎಂದು ಉತ್ತರಕೊಟ್ಟನು. PEPS
|
36. ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ, ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ.
|
37. ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು.
|