1. {ಸಬ್ಬತ್ ದಿನದ ಕುರಿತಾದ ವಿಚಾರಣೆ} (ಮತ್ತಾ 12:1-8; ಮಾರ್ಕ 2:23-28) PS ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು.
|
2. ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ,
|
3. ಯೇಸು ಅವರಿಗೆ, “ದಾವೀದನು ಮತ್ತು ಆತನ ಸಂಗಡ ಇದ್ದವರೂ ಹಸಿದಿದ್ದಾಗ, ಆತನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?
|
4. ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ,
|
6. {ಕೈ ಬತ್ತಿಹೋಗಿದ ಮನುಷ್ಯನನ್ನು ಸ್ವಸ್ಥಪಡಿಸಿದ್ದು} PS ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.
|
7. ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.
|
8. ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು.
|
9. ಆಗ ಯೇಸು ಅವರಿಗೆ, “ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?” ಎಂದು ಕೇಳಿ,
|
10. ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು.
|
12. {ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ನೇಮಿಸಿದ್ದು} (ಮತ್ತಾ 10:1-4; ಮಾರ್ಕ 3:13-19) PS ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.
|
13. ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
|
14. ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
|
17. {ಯೇಸು ಬೋಧಿಸಿದ್ದು ಹಾಗೂ ಗುಣಪಡಿಸಿದ್ದು} (ಮತ್ತಾ 4:23-25) PS ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.
|
18. ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು.
|
19. ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. ಮತ್ತಾ 5:1-12,38-48; 7:1-5,12,16-20,24-27 PEPS
|
20. {ಯೇಸುವಿನ ಪರ್ವತದ ಪ್ರಸಂಗ} PS ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ,
“ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. |
22. “ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.
|
23. ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.
|
25. ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ!
ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ. PEPS |
26. “ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು. PEPS
|
27. “ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;
|
29. ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.
|
32. “ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.
|
33. ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.
|
34. ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.
|
35. ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
|
37. “ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.
|
38. ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು. PEPS
|
39. ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ.
|
40. ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು. PEPS
|
41. “ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?
|
42. ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.
|
44. ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ.
|
45. ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು. PEPS
|
47. ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ.
|
48. ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.
|
49. ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.” PE
|