1. {ಯೇಸು ಕೈ ಬತ್ತಿಹೋದ ಮನುಷ್ಯನನ್ನು ಸ್ವಸ್ಥಪಡಿಸಿದ್ದು} PS ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ * ಸೊರಗಿಹೋದ ಕೈ, ದುರ್ಬಲವಾದ, ಬಲಹೀನವಾದದ್ದು, ಕಳೆಗುಂದು. ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು.
|
2. ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು.
|
4. ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು.
|
5. ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.
|
6. ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು. PS
|
7. {ಜನಪ್ರಿಯ ಯೇಸುವನ್ನು ಅನೇಕರು ಹಿಂಬಾಲಿಸಿದ್ದು} (ಮತ್ತಾ 10:1-4; ಲೂಕ 6:12-19) PS ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.
|
8. ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.
|
9. ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.
|
10. ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.
|
11. † ಮಾರ್ಕ 1:26-34; ಲೂಕ 4:41. ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು ‡ ಮತ್ತಾ 14:33: “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು.
|
13. {ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ನೇಮಿಸಿದ್ದು} PS ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.
|
14. ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ,
|
17. ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು.
|
18. ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,
|
20. {ಯೇಸುವು ಮತ್ತು ಬೆಲ್ಜೆಬೂಲನು} PS ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.
|
22. ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.
|
23. ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, “ಸೈತಾನನು ಸೈತಾನನನ್ನು ಬಿಡಿಸುವುದುಂಟೇ?
|
27. ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.
|
29. ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು.
|
31. {ಯೇಸುವಿನ ತಾಯಿ ಹಾಗೂ ಸಹೋದರರು} PS ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.
|
32. ಆ ಜನರು ಆತನಿಗೆ, “ನಿನ್ನ ತಾಯಿಯೂ, ನಿನ್ನ * ಮೂಲ ಭಾಷೆಯ ಕೆಲವು ಹಸ್ತಪ್ರತಿಗಳಲ್ಲಿ ಸಹೋದರರು ಮತ್ತು ಸಹೋದರಿಯರು ಎಂದು ಬರೆಯಲಾಗಿದೆ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು” ಎಂದು ಹೇಳಿದರು.
|