1. {ಊಟದಿಂದ ಮನುಷ್ಯನು ಕೆಡುವುದಿಲ್ಲವೆಂದು ಯೇಸು ಬೋಧಿಸಿದ್ದು} (ಮಾರ್ಕ 7:1-23) PS ತರುವಾಯ ಯೆರೂಸಲೇಮಿನಿಂದ ಫರಿಸಾಯರೂ, ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು,
|
2. “ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ” ಎಂದು ಕೇಳಿದರು.
|
3. ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?
|
4. ಹೇಗೆಂದರೆ * ವಿಮೋ 20:12: ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ † ವಿಮೋ 21:17: ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.
|
5. ನೀವೋ, ‘ಯಾವನಾದರೂ ತನ್ನ ತಂದೆಯನಾಗಲಿ, ತಾಯಿಯನ್ನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ’ ಎಂದು ಹೇಳಿದರೆ,
|
6. ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.
|
9. ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.
|
11. ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು” ಎಂದು ಹೇಳಿದನು. PEPS
|
14. ಅವರನ್ನು ಬಿಡಿರಿ, ಅವರು § ಮತ್ತಾ 23:16, 24; ಲೂಕ 6:39. ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.
|
19. ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.
|
20. ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ” ಅಂದನು. PS
|
21. {ಕಾನಾನ್ಯ ಸ್ತ್ರೀಯ ನಂಬಿಕೆ} (ಮಾರ್ಕ 7:24-30) PS ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು.
|
22. ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.
|
23. ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು.
|
24. ಆದರೆ ಯೇಸು ಹೇಳಿದ್ದೇನೆಂದರೆ * ಮತ್ತಾ 10:6: “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.
|
27. ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು.
|
28. ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು. PS
|
29. {ಯೇಸು ಅನೇಕರನ್ನು ಸ್ವಸ್ಥಮಾಡಿದ್ದು} PS ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು.
|
30. ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
|
31. ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ, ಕುಂಟರು ನಡೆದಾಡುವುದನ್ನೂ, ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು. PS
|
32. {ನಾಲ್ಕು ಸಾವಿರ ಜನರಿಗೆ ಊಟಮಾಡಿಸಿದ್ದು} (ಮಾರ್ಕ 8:1-10) PS ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು.
|
33. ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು.
|
34. ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು.
|
36. ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.
|