1. {ದ್ರಾಕ್ಷಾತೋಟದ ಕೂಲಿಯಾಳುಗಳ ಸಾಮ್ಯ} PS “ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.
|
2. ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.
|
3. ಅವನು ಪುನಃ ಸುಮಾರು * ಮೂಲ: ಮೂರು ಗಂಟೆಗೆ ಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು,
|
4. ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು.
|
5. ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತು † ಮೂಲ: ಆರು ಗಂಟೆಗೆ ಮತ್ತು ಒಂಭತ್ತು ಗಂಟೆಗೆ. ಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.
|
6. ಮತ್ತೊಂದು ಸಾರಿ ‡ ಮೂಲ: ಹನ್ನೊಂದು ಗಂಟೆಗೆ. ಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು.
|
7. ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.
|
8. ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.
|
10. ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
|
12. ‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು.
|
13. ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?
|
15. ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.
|
16. ಹೀಗೆ § ಮತ್ತಾ 19:30. ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು. ಯೇಸು ತನ್ನ ಕಷ್ಟ, ಮರಣ, ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು (ಮಾರ್ಕ 10:32-34; ಲೂಕ 18:31-35) PS
|
17. ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ,
|
18. “ನೋಡಿರಿ * ಮತ್ತಾ 16:21; ಲೂಕ 9:22. ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.
|
19. ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು † ಹೋಶೇ. 6:2. ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಯಾಕೋಬ, ಯೋಹಾನರ ತಾಯಿಯ ಬೇಡಿಕೆ (ಮಾರ್ಕ 10:35-45) PS
|
20. ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು.
|
21. ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.
|
22. ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.
|
23. ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು. PEPS
|
25. ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನರ ‡ ಲೂಕ 22:25-27. ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.
|
28. ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು. PS
|
29. {ಯೇಸು ಇಬ್ಬರು ಕುರುಡರಿಗೆ ದೃಷ್ಟಿ ಕೊಟ್ಟದ್ದು} (ಮಾರ್ಕ 10:46-52; ಲೂಕ 18:35-43) PS ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು.
|
30. ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು.
|
31. ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, “ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಗಟ್ಟಿಯಾಗಿ ಕೂಗಿಕೊಂಡರು.
|
34. ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು. PE
|