1. {ಹತ್ತುಮಂದಿ ಕನ್ಯೆಯರ ಸಾಮ್ಯ} PS “ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು * ದೀವಟಿಗೆಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.
|
6. ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು.
|
9. ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು.
|
10. ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.
|
14. {ತಲಾಂತುಗಳ ಸಾಮ್ಯ} PS “ದೇವರ ರಾಜ್ಯವು ಹೇಗೆಂದರೆ ‡ ಲೂಕ 9:12-27 ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.
|
15. ಅವನು ಒಬ್ಬನಿಗೆ ಐದು § 3,000 ರೂಪಾಯಿ ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.
|
20. ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು.
|
21. ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.
|
22. ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು.
|
23. ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.
|
24. ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು
|
25. ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು.
|
26. ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?
|
27. ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ,
|
29. ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.
|
30. ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’ PEPS
|
31. * ಯೋವೇ. 3:12 “ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;
|
32. ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.
|
34. ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.
|
35. ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;
|
36. ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.
|
37. ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು?
|
38. ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು?
|
39. ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು.
|
40. ಅದಕ್ಕೆ ಉತ್ತರವಾಗಿ ಅರಸನು, † ಮತ್ತಾ 10:42 ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
|
41. ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.
|
43. ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.
|
44. ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.
|
45. ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
|
46. ಮತ್ತು ಅನೀತಿವಂತರಾದ ಇವರು ‡ ದಾನಿ. 12:2; ಯೋಹಾ 5:29 ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು. PE
|