2. {ಯೇಸು ಪಾರ್ಶ್ವವಾಯು ರೋಗಿಯ ಪಾಪವನ್ನು ಕ್ಷಮಿಸಿ ಸ್ವಸ್ಥಮಾಡಿದ್ದು} (ಮಾರ್ಕ 2:1-12; ಲೂಕ 5:17-26) PS ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
|
6. ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು.
|
9. {ಯೇಸು ಮತ್ತಾಯನನ್ನು ಕರೆದದ್ದು} (ಮಾರ್ಕ 2:13; ಲೂಕ 5:27-32) PS ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು. PEPS
|
10. ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು.
|
11. ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
|
13. ನೀವು ಹೋಗಿ, ‘ನಾನು ಯಜ್ಞವನ್ನಲ್ಲ, * ಹೋಶೇ. 6:6; ಮತ್ತಾ 12:7; ಮೀಕ 6:8 ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು. ಉಪವಾಸದ ವಿಷಯವಾಗಿ ಪ್ರಶ್ನೆ (ಮಾರ್ಕ 2:18-22; ಲೂಕ 5:33-39) PEPS
|
14. ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ,
|
15. “ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ
|
17. ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು. ಯೇಸು ಒಬ್ಬ ಹುಡುಗಿಯನ್ನು ಬದುಕಿಸಿದ್ದು; ಇನ್ನೂ ಕೆಲವು ಅದ್ಭುತಗಳನ್ನು ನಡೆಸಿದ್ದು (ಮಾರ್ಕ 5:22-43; ಲೂಕ 8:41-56) PS
|
18. ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.
|
21. “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.
|
22. ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು. PEPS
|
27. ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.
|
28. ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು.
|
29. ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ” ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು.
|
33. ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು.
|
35. {ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಆರಿಸಿಕೊಂಡು ಸುವಾರ್ತೆಯನ್ನು ಸಾರುವುದಕ್ಕೆ ಕಳುಹಿಸಿದ್ದು} (ಮಾರ್ಕ 3:13-19; 6:6-13; ಲೂಕ 6:12-16; 9:1-6) PS ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
|
36. ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.
|
38. ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು. PE
|