1. {ಯಜ್ಞಪಶುಗಳೊಡನೆ ಸಮರ್ಪಿಸಬೇಕಾದ ನೈವೇದ್ಯದ್ರವ್ಯಗಳ ವಿವರಣೆ} PS ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
|
3. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,
|
4. ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.
|
5. ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು. PEPS
|
6. “ ‘ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ,
|
8. “ ‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,
|
9. ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.
|
10. ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು. PEPS
|
14. ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.
|
15. ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.
|
20. ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು. PS
|
21. {ತಿಳಿಯದೆ ಮಾಡಿದ ತಪ್ಪಿಗಾಗಿ ದೋಷಪರಿಹಾರವನ್ನು ಮಾಡುವ ವಿಧಾನ} PS “ ‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
|
23. ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿನದಿಂದ ಮೊದಲುಗೊಂಡು ನಿಮಗೂ ಮತ್ತು ನಿಮ್ಮ ಸಂತತಿಗೂ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ನೀವು ಮಾಡದೆ ಹೋದರೆ,
|
24. ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
|
25. ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,
|
26. ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು. PEPS
|
28. ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
|
30. ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
|
31. ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’ ” PS
|
32. {ಸಬ್ಬತ್ ದಿನದಲ್ಲಿ ಕೆಲಸಮಾಡಿದವನಿಗೆ ಮರಣಶಿಕ್ಷೆ ವಿಧಿಸಲ್ಪಟ್ಟಿದ್ದು} PS ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.
|
34. ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.
|
35. ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.
|
36. ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು. PS
|
37. {ಇಸ್ರಾಯೇಲರು ಬಟ್ಟೆಯ ಮೂಲೆಗಳಿಗೆ ಗೊಂಡೆ ಕಟ್ಟಿಕೊಳ್ಳಬೇಕೆಂಬುದು} PS ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
|
38. “ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.
|
39. ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ
|
40. ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ.
|
41. ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.” PE
|