1. {ಇಸ್ರಾಯೇಲರು ಅರಾದಿನ ಅರಸನನ್ನು ಜಯಿಸಿದ್ದು} PS ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಅತಾರೀಮ್ ಮಾರ್ಗವಾಗಿ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ, ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.
|
2. ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು.
|
3. ಯೆಹೋವನು ಇಸ್ರಾಯೇಲರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸುವಂತೆ ಮಾಡಿದನು. ಅವರನ್ನು ಮತ್ತು ಅವರ ಪಟ್ಟಣಗಳನ್ನು ಇಸ್ರಾಯೇಲರು ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ * ಹೊರ್ಮಾ ಅಂದರೆ ನಾಶ. ಹೊರ್ಮಾ ಎಂದು ಹೆಸರಾಯಿತು. PS
|
4. {ಮೋಶೆ ತಾಮ್ರದ ಸರ್ಪವನ್ನು ಮಾಡಿಸಿದ್ದು} PS ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.
|
5. ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.
|
6. ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.
|
7. ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.
|
8. ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು.
|
9. ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು. PS
|
13. ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ. PEPS
|
14. ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ,
“ಸೂಫಕ್ಕೆ ಸೇರಿದ ವಾಹೇಬನ್ನೂ, ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ, |
16. ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು. PEPS
|
18. ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ,
ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ” ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ, PEPS |
20. ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ. ಸೀಹೋನ್, ಓಗ್ ಅರಸರ ಸೋಲು PEPS
|
22. “ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.
|
23. ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
|
24. ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.
|
25. ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.
|
26. ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು. PEPS
|
27. ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ;
“ಹೆಷ್ಬೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು. |
28. ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು,
ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು. |
29. ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ!
ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು. |
30. ನಾವು ಅವರನ್ನು ಬಾಣದಿಂದ ಹೊಡೆದೆವು;
† ಹೆಷ್ಬೋನಿನಿಂದ ದೀಬೋನಿವರೆಗೂ ನಾವು ಕಲ್ಲೆಸೆದು ಅವರೆಲ್ಲರನ್ನು ಕೊಂದೆವು. ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.” PEPS |
32. ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು. PEPS
|
33. ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು.
|
34. ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು.
|
35. ಆದಕಾರಣ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು. PE
|