2. “ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು” ಎಂದು ಹೇಳಿದನು. PEPS
|
3. ಆಗ ಮೋಶೆಯು ಇಸ್ರಾಯೇಲರಿಗೆ, “ನಿಮ್ಮೊಳಗಿಂದ ಕೆಲವರು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಸಿದ್ಧಮಾಡಿಕೊಳ್ಳಬೇಕು. ಯೆಹೋವನ ಪ್ರತಿದಂಡನೆಯನ್ನು ಅವರಿಗೆ ತೀರಿಸಬೇಕು.
|
5. ಆದಕಾರಣ ಇಸ್ರಾಯೇಲರು ಕುಲವೊಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಎಣಿಕೆಮಾಡಿ ಕಳುಹಿಸಿದರು. PEPS
|
6. ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು. PEPS
|
8. ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು. PEPS
|
9. ಇಸ್ರಾಯೇಲರು ಮಿದ್ಯಾನ್ಯರ ಎಲ್ಲಾ ಹೆಂಗಸರನ್ನೂ, ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ, ಆಸ್ತಿಯನ್ನೂ ಸೂರೆಮಾಡಿದರು.
|
12. ಮತ್ತು ಅವರು ಸೆರೆಯವರನ್ನೂ, ಪಶುಗಳನ್ನೂ, ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್ ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಬಂದರು. PEPS
|
16. ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.
|
19. ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.
|
20. ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ, ತೊಗಲಿನ ಸಾಮಾನನ್ನೂ, ಮೇಕೆ ಕೂದಲಿನ ವಸ್ತ್ರಗಳನ್ನು ಮರದ ವಸ್ತುಗಳನ್ನು ಶುದ್ಧ ಮಾಡಿಕೊಳ್ಳಬೇಕು” ಎಂದು ಹೇಳಿದನು. PEPS
|
21. ಮಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗೆಂದನು, “ಯೆಹೋವನು ಮೋಶೆಗೆ ಅಪ್ಪಣೆಮಾಡಿದ ನಿಯಮ ಏನೆಂದರೆ,
|
22. ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು,
|
23. ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯಿಂದ ಸುಡಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.
|
24. ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಮೇಲೆ ನೀವು ಪಾಳೆಯದೊಳಗೆ ಬರಬಹುದು” ಎಂದು ಹೇಳಿದನು. PS
|
26. “ನೀನೂ, ಮಹಾಯಾಜಕನಾದ ಎಲ್ಲಾಜಾರನೂ, ಕುಲಾಧಿಪತಿಗಳೂ ಸಮೂಹದವರ ಕೈಗೆ ಸಿಕ್ಕಿದ ಮನುಷ್ಯರನ್ನೂ, ಪಶುಗಳನ್ನೂ ಲೆಕ್ಕಿಸಿ,
|
28. ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೆ ಕಪ್ಪವನ್ನು ಎತ್ತಬೇಕು.
|
30. ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.
|
41. ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು. PEPS
|
47. ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು. PEPS
|
49. “ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.
|
50. ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು.
|
51. ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡರು. ಅವುಗಳೆಲ್ಲಾ ವಿಚಿತ್ರವಾದ ಆಭರಣಗಳು. PEPS
|
52. ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ - 16,750 ತೊಲೆ.
|
54. ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಕೊಟ್ಟ ಚಿನ್ನವನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕ ಮಾಡುವುದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು. PE
|