1. {ಸ್ತ್ರೀಯರು ಮತ್ತು ಆಸ್ತಿಯ ಬಾಧ್ಯತೆ} PS ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನಾದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಮತ್ತು ಇಸ್ರಾಯೇಲರ ಕುಲಾಧಿಪತಿಗಳ ಬಳಿಗೆ ಬಂದು,
|
2. “ದೇಶವನ್ನು ಚೀಟುಹಾಕಿ ಇಸ್ರಾಯೇಲರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವತ್ತನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕು ಎಂದು ಅಪ್ಪಣೆಮಾಡಿದನು.
|
3. ಹೀಗಿರಲು ಅವರು ಇಸ್ರಾಯೇಲರ ಬೇರೆ ಕುಲದವರಿಗೆ ಮದುವೆಯಾದ ಪಕ್ಷಕ್ಕೆ ಅವರ ಸ್ವತ್ತು ನಮ್ಮ ಕುಲದಿಂದ ತೆಗೆಯಲ್ಪಟ್ಟು ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುವುದು. ಆದುದರಿಂದ ನಮ್ಮ ಸ್ವತ್ತಿಗೆ ನಷ್ಟವುಂಟಾಗುವುದು.
|
4. ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.
|
6. ಆದಕಾರಣ ಯೆಹೋವನು ಚಲ್ಪಹಾದನ ಹೆಣ್ಣುಮಕ್ಕಳ ವಿಷಯವಾಗಿ ಅಜ್ಞಾಪಿಸಿದ್ದೇನೆಂದರೆ, ‘ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕು’ ಎಂಬುದೇ.
|
7. ಇಸ್ರಾಯೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲರೆಲ್ಲರೂ ತಮ್ಮತಮ್ಮ ಕುಲಗಳ ಸ್ವತ್ತನ್ನು ಹೊಂದಿಕೊಂಡೇ ಇರಬೇಕು.
|
9. ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲರ ಪ್ರತಿಯೊಂದು ಕುಲವು ತನ್ನ ಸ್ವತ್ತನ್ನು ಹೊಂದಿಕೊಂಡೇ ಇರುವುದು” ಎಂದು ಆಜ್ಞಾಪಿಸಿದನು.
|
11. ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬುವವರು ಮನಸ್ಸೆಯ ಕುಲದವರನ್ನು ಮದುವೆಮಾಡಿಕೊಂಡರು.
|
13. ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ. PE
|