2. “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ * ಯೆಹೋವನಿಗಾಗಿ ಪ್ರತ್ಯೇಕಿಸಲ್ಪಟ್ಟವನು ಅಥವಾ ಪ್ರತಿಷ್ಠಿಸಲ್ಪಟ್ಟವನು. ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,
|
3. ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು.
|
4. ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಲತೆಯಿಂದ ಬೆಳೆದ ಬೀಜವನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು. PEPS
|
5. “ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.
|
7. ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.
|
9. ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.
|
10. ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
|
11. ಯಾಜಕನು ಒಂದನ್ನು ದೋಷಪರಿಹಾರ ಯಜ್ಞವಾಗಿ, ಇನ್ನೊಂದನ್ನು ಸರ್ವಾಂಗಹೋಮವಾಗಿ ಸಮರ್ಪಿಸಿ ಶವಸೋಂಕಿದವನಿಗಾಗಿ ದೋಷಪರಿಹಾರ ಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು.
|
12. ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.
|
13. ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು.
|
14. ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದಟಗರನ್ನು ಹಾಗು ತರಬೇಕು.
|
15. ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.
|
16. ಯಾಜಕನು ಇವುಗಳನ್ನು ಯೆಹೋವನ ಸನ್ನಿಧಿಗೆ ತಂದು ನಾಜೀರನ ದೋಷಪರಿಹಾರಕ ಯಜ್ಞವನ್ನೂ ಮತ್ತು ಸರ್ವಾಂಗಹೋಮವನ್ನೂ ಸಮರ್ಪಿಸಬೇಕು.
|
17. ಆ ಟಗರನ್ನೂ, ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ, ಯಾಜಕನು ಯೆಹೋವನಿಗೆ ಸಮಾಧಾನಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು.
|
18. ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
|
19. ತರುವಾಯ ಯಾಜಕನು ಆ ಟಗರಿನ ಬೇಯಿಸಿದ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು.
|
20. ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.
|
21. ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.” PS
|
23. “ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,
|