1. ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, [QBR2] ಅವರ ಸಹವಾಸವನ್ನು ಬಯಸಬೇಡ. [QBR]
2. ಅವರ ಮನಸ್ಸು ಹಿಂಸೆಯನ್ನು ಯೋಚಿಸುತ್ತಿರುವುದು, [QBR2] ಅವರ ತುಟಿಯು ಹಾನಿಯನ್ನು ಪ್ರಸ್ತಾಪಿಸುತ್ತಿರುವುದು. [QBR]
3. ಮನೆಯನ್ನು ಕಟ್ಟುವುದಕ್ಕೆ ಜ್ಞಾನವೇ ಸಾಧನ, [QBR2] ಅದನ್ನು ಸ್ಥಿರಪಡಿಸುವುದಕ್ಕೆ ವಿವೇಕವೇ ಆಧಾರ, [QBR]
4. ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ, [QBR2] ಇಷ್ಟ ಸಂಪತ್ತಿನಿಂದ ತುಂಬಿಸುವುದಕ್ಕೆ, [QBR2] ತಿಳಿವಳಿಕೆಯೇ ಉಪಕರಣ. [QBR]
5. ಜ್ಞಾನಿಗೆ ತ್ರಾಣ, [QBR2] ಬಲ್ಲವನಿಗೆ ಬಹು ಬಲ. [QBR]
6. ಮಂತ್ರಾಲೋಚನೆಯಿಂದ ಯುದ್ಧವನ್ನು ನಡೆಸು, [QBR2] ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವುದು. [QBR]
7. ಜ್ಞಾನವು ಮೂರ್ಖನಿಗೆ ನಿಲುಕದು, [QBR2] ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು. [QBR]
8. ಕೇಡನ್ನು ಕಲ್ಪಿಸುವವನು, [QBR2] ಕುಯುಕ್ತಿಯುಳ್ಳವನು ಎನಿಸಿಕೊಳ್ಳುವನು. [QBR]
9. ಮೂರ್ಖನ ಸಂಕಲ್ಪವು ಪಾಪವೇ, [QBR2] ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ. [QBR]
10. ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ, [QBR2] ನಿನ್ನ ಬಲವೂ ಇಕ್ಕಟ್ಟೇ. [QBR]
11. ಕೊಲೆಗೆ ಸೆಳೆಯಲ್ಪಟ್ಟವರನ್ನು ರಕ್ಷಿಸು, [QBR2] ಸಂಹಾರಕ್ಕೆ ಗುರಿಯಾದವರನ್ನು ತಪ್ಪಿಸು. [QBR]
12. “ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, [QBR2] ಹೃದಯಶೋಧಕನು ಗ್ರಹಿಸುವುದಿಲ್ಲವೋ? [QBR] ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? [QBR2] ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ? [QBR]
13. ಕಂದಾ, ಜೇನು ಚೆನ್ನಾಗಿದೆಯಲ್ಲವೆ, [QBR2] ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ, ಅದನ್ನು ತಿನ್ನು. [QBR]
14. ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ, [QBR2] ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು, [QBR2] ನಿನ್ನ ನಿರೀಕ್ಷೆಯು ನಿರರ್ಥಕವಾಗದು. [QBR]
15. ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, [QBR2] ಅವನ ನಿವಾಸವನ್ನು ಸೂರೆಮಾಡಬೇಡ. [QBR]
16. ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, [QBR2] ದುಷ್ಟನು ಕೇಡಿನಿಂದ ಬಿದ್ದೇಹೋಗುವನು. [QBR]
17. ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, [QBR2] ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ. [QBR]
18. ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು, [QBR2] ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಾನು. [QBR]
19. ಕೆಡುಕರ ಮೇಲೆ ಉರಿಗೊಳ್ಳದಿರು, [QBR2] ದುಷ್ಟರನ್ನು ನೋಡಿ ಹೊಟ್ಟೆಕಿಚ್ಚುಪಡದಿರು. [QBR]
20. ಕೆಟ್ಟವನಿಗೆ ಶುಭಕಾಲವು ಬಾರದು, [QBR2] ದುಷ್ಟರ ದೀಪವು ಆರಿಯೇ ಹೋಗುವುದು. [QBR]
21. ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, [QBR2] ತಿರುಗಿಬೀಳುವವರ ಗೊಡವೆಗೆ ಹೋಗಬೇಡ. [QBR]
22. ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವುದು, [QBR2] ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?
23. {ಬೇರೆ ಕೆಲವು ಹೇಳಿಕೆಗಳು} [PS] ಇವು ಕೂಡ ಜ್ಞಾನಿಗಳ ಮಾತುಗಳು: [QBR2] ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ. [QBR]
24. ಯಾವನು ಅಧರ್ಮಿಗೆ, “ನೀನು ಧರ್ಮಾತ್ಮನು” ಎಂದು ಹೇಳುತ್ತಾನೋ, [QBR2] ಅವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು. [QBR]
25. ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವುದು, [QBR2] ಸುಖಕರವಾದ ಆಶೀರ್ವಾದವೂ ಲಭಿಸುವುದು. [QBR]
26. ಯಥಾರ್ಥವಾದ ಉತ್ತರವು, [QBR2] ತುಟಿಗೆ ಮುದ್ದು. [QBR]
27. ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, [QBR2] ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, [QBR2] ಆಮೇಲೆ ನಿನ್ನ ಮನೆಯನ್ನು ಕಟ್ಟು. [QBR]
28. ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ, [QBR2] ಮಾತಿನಿಂದ ಮೋಸಮಾಡಬೇಡ. [QBR]
29. “ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, [QBR2] ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು” ಅಂದುಕೊಳ್ಳಬೇಡ. [QBR]
30. ಸೋಮಾರಿಯ ಹೊಲದ ಮೇಲೆಯೂ, [QBR2] ಬುದ್ಧಿಹೀನನ ದ್ರಾಕ್ಷಿಯ ತೋಟದ ಮೇಲೆಯೂ ಹಾದು ಹೋದೆನು. [QBR]
31. ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು, [QBR2] ಕಳೆಗಳು ಅದನ್ನು ಮುಚ್ಚಿದ್ದವು, [QBR2] ಅದರ ಕಲ್ಲಿನ ಗೋಡೆಯು ಹಾಳಾಗಿತ್ತು. [QBR]
32. ಆಗ ನಾನು ನೋಡಿ ಆಲೋಚಿಸಿದೆನು, [QBR2] ದೃಷ್ಟಿಸಿ ಶಿಕ್ಷಿತನಾದೆನು. [QBR]
33. ಇನ್ನು ಸ್ವಲ್ಪ ನಿದ್ದೆ, ಇನ್ನು ತುಸ ತೂಕಡಿಕೆ, [QBR2] ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ ಅಂದುಕೊಳ್ಳುವಿಯಾ? [QBR]
34. ಬಡತನವು ದಾರಿಗಳ್ಳನ ಹಾಗೂ, [QBR2] ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು. [PE]