1. {ನೀತಿವಂತರಾದವರಿಗೆ ದೊರೆಯುವಂಥ ಫಲಗಳು} PS ಹೀಗಿರಲಾಗಿ ನಾವು * ರೋಮಾ. 3:28 ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ † ರೋಮಾ. 15:13 ದೇವರೊಂದಿಗೆ ನಮಗೆ ಸಮಾಧಾನವುಂಟು.
|
2. ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ‡ ಎಫೆ 2:18, ಇಬ್ರಿ. 10:19-20 ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.
|
4. ಏಕೆಂದರೆ § ಲೂಕ 21:19, ಯಾಕೋಬ. 1:3 ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.
|
5. * ಕೀರ್ತ 119:116, ಫಿಲಿ. 1:20 ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, † ಅ. ಕೃ. 2:17, 18:33, ತೀತ. 3:6 ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ. PEPS
|
6. ನಾವು ‡ ರೋಮಾ. 5:8-10 ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ § ರೋಮಾ. 4:25 ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
|
7. ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.
|
8. ಆದರೆ ನಾವು * ರೋಮಾ. 5:6 ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ † ಯೋಹಾ 3:16 ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
|
9. ಈಗ ನಾವು ‡ ರೋಮಾ. 3:25 ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
|
10. ನಾವು ದೇವರಿಗೆ § ರೋಮಾ. 5:6-8 ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ * 2 ಕೊರಿ 5:18-20, ಎಫೆ 2:16, ಕೊಲೊ 1:20-22 ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ † 2 ಕೊರಿ 4:10-11 ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
|
11. ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ. PS
|
12. {ಆದಾಮನಿಂದ ಎಲ್ಲರಿಗೂ ಮರಣವಾದಂತೆ ಕ್ರಿಸ್ತನನ್ನು ನಂಬಿದವರೆಲ್ಲರಿಗೂ ರಕ್ಷಣೆಯಾಗುವುದು} PS ಈ ವಿಷಯ ಹೇಗೆಂದರೆ ‡ ಆದಿ 2:17, 3:6, 1 ಕೊರಿ 15:21-22 ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.
|
13. ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ § ರೋಮಾ. 3:20 ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ.
|
14. ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳ್ವಿಕೆಯು ನಡೆಯುತ್ತಿತ್ತು. ಆದಾಮನು ದೇವರ ಆಜ್ಞೆಯನ್ನು ಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. * 1 ಕೊರಿ 15:45 ಆ ಆದಾಮನು ಬರಬೇಕಾದ ಒಬ್ಬಾತನಾದ ಕ್ರಿಸ್ತನಿಗೆ ಪ್ರತಿರೂಪನಾಗಿದ್ದಾನೆ. PEPS
|
15. ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ † ರೋಮಾ. 5:19 ಯೆಶಾ 53:11 ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.
|
16. ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಂದು ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ ‡ ರೋಮಾ. 5:19 ಅವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಕಾರಣವಾಯಿತು.
|
17. ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ § ಪ್ರಕ 22:5 ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ. PEPS
|
18. ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು.
|
19. ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ * ಇಬ್ರಿ. 5:8, ಫಿಲಿ. 2:8 ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.
|
20. † ಗಲಾ. 3:19, ರೋಮಾ. 3:20 ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ‡ 1 ತಿಮೊ. 1:14 ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
|
21. ಹೀಗೆ § ರೋಮಾ. 5:12-14 ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು. PE
|