4. ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
|
7. ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
|
10. ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
|
11. ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು.
|
12. ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
|
13. ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
|
16. ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
|
17. ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
|
21. ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
|
24. ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
|
25. ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು.
|
28. ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.
|
29. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
|
30. ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ.
|
32. ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
|
37. ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
|
42. ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
|
46. ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
|