1. ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.
|
2. ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
|
3. ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
|
6. ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.
|
7. ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
|
9. ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
|
15. ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
|
22. ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
|
24. ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
|
26. ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ.
|
29. ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
|
30. ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
|
31. ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
|
32. ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;
|
38. ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
|
39. ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
|
43. ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
|
45. ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
|