1. ನಾನು ಸಹ ಮೇದ್ಯನಾದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ ಅವ ನನ್ನು ಸ್ಥಿರಪಡಿಸುವದಕ್ಕೂ ಬಲಪಡಿಸುವದಕ್ಕೂ ನಿಂತಿ ದ್ದೇನೆ.
|
2. ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.
|
4. ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.
|
5. ದಕ್ಷಿಣದ ಅರಸನು ಬಲಿಷ್ಠನಾಗಿ ರುವನು. ಆದರೆ ಅವನ ಪ್ರಧಾನರಲ್ಲಿ ಒಬ್ಬನು ಇವನಿ ಗಿಂತ ಬಲಿಷ್ಠನಾಗಿದ್ದು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವದು.
|
6. ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಆ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ.
|
7. ಆದರೆ ಅವಳ ಬೇರುಗಳ ಚಿಗುರಿನಿಂದ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು ಸೈನ್ಯದೊಂದಿಗೆ ಬಂದು ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ ಅವರನ್ನು ವಿರೋಧಿಸಿ ಪ್ರಬಲವಾಗುವನು.
|
8. ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.
|
10. ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.
|
11. ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಅವನ ಸಂಗಡ ಅಂದರೆ ಉತ್ತರದ ಅರಸನ ಸಂಗಡ ಯುದ್ಧಮಾಡುವನು; ಅವನು ಮಹಾ ಸೈನ್ಯವನ್ನು ನಿಲ್ಲಿಸುವನು; ಆದರೆ ಆ ಮಹಾ ಸಮೂಹವು ಇವನ ಕೈಗೆ ಕೊಡಲ್ಪಡುವದು.
|
12. ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
|
13. ಉತ್ತರದ ಅರಸನು ಮತ್ತೆ ತಿರುಗಿಕೊಂಡು ಮೊದಲನೇ ಸಾರಿಗಿಂತಲೂ ದೊಡ್ಡ ಸಮೂಹವನ್ನು ನಿಲ್ಲಿಸಿ ಕೆಲವು ವರುಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ ಬಹಳ ಸಂಪತ್ತಿನ ಸಂಗಡವೂ ನಿಶ್ಚಯವಾಗಿ ಬರುವನು.
|
14. ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು; ಅಲ್ಲದೆ ನಿನ್ನ ಜನರಲ್ಲಿ ದರೋಡೆಕೋರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಮ್ಮನ್ನು ತಾವು ಹೆಚ್ಚಿಸಿಕೊಳ್ಳುವರು; ಆದರೆ ಅವರು ಬಿದ್ದು ಹೋಗುವರು.
|
15. ಆದರೆ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ ದಿಬ್ಬವನ್ನು ಕೆಡವಿ ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳು ವನು; ದಕ್ಷಿಣದ ಭುಜಬಲವಾದರೂ ಅವನು ಆದು ಕೊಂಡ ಜನರಾದರೂ ನಿಲ್ಲುವದಕ್ಕೆ ಬಲವಿರುವದಿಲ್ಲ.
|
16. ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.
|
17. ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನನ್ನು ಎದುರುಗೊಳ್ಳುವನು. ಪ್ರಮಾಣಿ ಕರು ಅವನೊಂದಿಗಿರುವರು; ಹೀಗೆ ಅವನು ಮಾಡು ವನು. ಮತ್ತು ಹೆಣ್ಣು ಮಗಳನ್ನು ಕೆಡಿಸುವದಕ್ಕೆ ಅವನಿಗೆ ಕೊಡುವನು. ಆದರೆ ಅವಳು ಅವನ ಕಡೆಗೆ ನಿಲ್ಲುವ ದಿಲ್ಲ, ಅವನಿಗಾಗಿ ಇರುವದಿಲ್ಲ.
|
18. ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ ಆನೇಕರನ್ನು ವಶಪಡಿಸಿಕೊಳ್ಳುವನು; ಆದರೆ ಒಬ್ಬ ಅಧಿಪತಿಯು ತನಗಾಗಿ ಅವನ ನಿಂದೆಯನ್ನು ಅಡಗಿಸಿ ಬಿಡುವನು; ಆ ನಿಂದೆಯನ್ನು ತನ್ನ ಮೇಲೆ ಹಾಕಿಕೊಳ್ಳದೆ ಅವನ ಮೇಲೆ ತಿರುಗಿಸಿಬಿಡುವನು.
|
20. ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.
|
21. ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.
|
24. ನೆಮ್ಮದಿಯಿಂದ ಸಂಸ್ಥಾನದ ಫಲವತ್ತಾದ ಪ್ರದೇಶ ಗಳಲ್ಲಿ ನುಗ್ಗಿ ತಂದೆ ತಾತಂದಿರು ಮಾಡದ ಕಾರ್ಯ ಗಳನ್ನು ಮಾಡುವನು; ಸೂರೆ, ಸುಲಿಗೆ, ಕೊಳ್ಳೆಹೊಡೆ ದವುಗಳನ್ನು ಅವರಲ್ಲಿ ಚೆಲ್ಲಿಬಿಡುವನು. ಹೌದು, ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತ ಕಾಲದ ತನಕ ಕಲ್ಪಿಸುತ್ತಿರುವನು.
|
25. ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
|
26. ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು.
|
27. ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
|
28. ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.
|
30. ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
|
31. ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
|
32. ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.
|
33. ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
|
35. ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
|
36. ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
|
37. ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
|
38. ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು.
|
39. ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.
|
40. ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
|
41. ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.
|
43. ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು.
|
44. ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
|
45. ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
|