1. ಓ ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ; ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೊಲಗಿಸಿದರೆ ಕದಲದೆ ಇರುವಿ.
|
2. ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
|
3. ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.
|
4. ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
|
5. ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
|
6. ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ಹಿಂದಕ್ಕೆ ಹೋಗಿರಿ, ನಿಲ್ಲಬೇಡಿರಿ; ನಾನು ಉತ್ತರದಿಂದ ಕೇಡನ್ನೂ ದೊಡ್ಡ ನಾಶನವನ್ನೂ ತರುತ್ತೇನೆ.
|
7. ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
|
8. ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.
|
9. ಆ ದಿವಸದಲ್ಲಿ ಆಗುವದೇನಂದರೆ--ಅರಸನ ಹೃದಯವೂ ಸಾಮಂ ತರ ಹೃದಯವೂ ಹಾಳಾಗುವದು. ಯಾಜಕರು ಆಶ್ಚರ್ಯಪಡುವರು; ಪ್ರವಾದಿಗಳು ಭ್ರಮೆಗೊಳ್ಳು ವರು ಎಂದು ಕರ್ತನು ಅನ್ನುತ್ತಾನೆ.
|
10. ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
|
11. ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
|
12. ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು.
|
13. ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
|
14. ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
|
16. ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ.
|
17. ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿ ದ್ದಾರೆ; ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು ಕರ್ತನು ಅನ್ನುತ್ತಾನೆ.
|
18. ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?
|
19. ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
|
20. ನಾಶ ನದ ಮೇಲೆ ನಾಶನವು ಕೂಗಲ್ಪಟ್ಟಿದೆ, ದೇಶವೆಲ್ಲಾ ಹಾಳಾಯಿತು; ಫಕ್ಕನೆ ನನ್ನ ಗುಡಾರಗಳೂ ಕ್ಷಣ ಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.
|
22. ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
|
23. ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.
|
26. ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
|
28. ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
|
29. ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
|
30. ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
|
31. ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
|
32. ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
|
34. ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
|
35. ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು.
|
36. ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
|
37. ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
|
38. ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು.
|
40. ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.
|
41. ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
|
43. ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.
|
45. ಆದ ದರಿಂದ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಈ ಮಾತನ್ನಾಡುವದರಿಂದ ಇಗೋ, ನಾನು ನಿನ್ನ ಬಾಯಲ್ಲಿರುವ ನನ್ನ ಮಾತುಗಳನ್ನು ಬೆಂಕಿಯಾಗಿಯೂ ಈ ಜನರನ್ನು ಕಟ್ಟಿಗೆಯಾಗಿಯೂ ಮಾಡುವೆನು; ಅದು ಅವರನ್ನು ತಿಂದುಬಿಡುವದು.
|
46. ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
|
48. ನಿನ್ನ ಕುಮಾರರು, ಕುಮಾರ್ತೆಯರು ತಿನ್ನತಕ್ಕ ನಿನ್ನ ಪೈರನ್ನೂ ರೊಟ್ಟಿಯನ್ನೂ ತಿನ್ನುವರು, ಕುರಿಗಳನ್ನೂ ದನಗಳನ್ನೂ ತಿನ್ನುವರು, ದ್ರಾಕ್ಷೇ ಗಿಡ ಗಳನ್ನೂ ಅಂಜೂರದ ಗಿಡಗಳನ್ನೂ ತಿನ್ನುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಕತ್ತಿಯಿಂದ ಬಡವಾಗ ಮಾಡುವರು.
|
50. ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು.
|
53. ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
|
55. ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.
|
57. ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.
|
58. ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ;
|
59. ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
|
60. ಇವುಗಳ ನಿಮಿತ್ತ ನಾನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
|
61. ಆಶ್ಚರ್ಯವೂ ಭಯಂಕರವೂ ಆದ ಕಾರ್ಯವು ದೇಶದಲ್ಲಿ ನಡೆಯು ತ್ತದೆ,ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
|
62. ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
|