1. ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.
|
2. ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
|
3. ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
|
5. ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.
|
6. ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.
|
7. ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು.
|
8. ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು.
|
9. ಆ ದಿವಸದಲ್ಲಿ ಅವನ ಬಲ ವಾದ ಪಟ್ಟಣಗಳು ಬಿಟ್ಟುಬಿಟ್ಟ ಅರಣ್ಯಗಳ ಹಾಗೆಯೂ ಇಸ್ರಾಯೇಲಿನ ಮಕ್ಕಳ ಮುಂದೆ ಬಿಡಲ್ಪಟ್ಟ ಕೊನೆಗಳ ಹಾಗೆಯೂ ಇದ್ದು ಹಾಳಾಗಿರುವದು.
|
10. ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.
|
11. ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
|
12. ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ!
|
13. ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
|
14. ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
|