1. ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ
|
3. ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.
|
4. ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
|
5. ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು.
|
6. ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
|
7. ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.
|
8. ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
|
9. ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
|
10. ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
|
12. ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
|
14. ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
|
15. ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
|
16. ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
|
18. ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
|
20. ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
|
21. ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
|
22. ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
|