2. ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
|
4. ಯೇಸು ಕ್ರಿಸ್ತನಿಂದ ದೇವರು ನಿಮಗೆ ಅನುಗ್ರಹಿ ಸಿದ ಕೃಪೆಯ ನಿಮಿತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.
|
5. ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ.
|
7. ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ.
|
8. ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
|
10. ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
|
12. ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
|
13. ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?
|
14. ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
|
16. ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು.
|
17. ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
|
18. ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
|
19. ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.
|
20. ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
|
21. ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
|
23. ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
|
25. ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ.
|
26. ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
|
27. ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
|
28. ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
|
30. ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.
|