3. ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
|
4. ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
|
5. ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
|
6. ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
|
7. ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
|
8. ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
|
9. ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.
|
10. ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
|
11. ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.
|
12. ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.
|
13. ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
|
15. ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು.
|
16. ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
|
17. ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.
|
19. ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
|
21. ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
|
22. ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
|
23. ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರು ವದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
|
26. ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
|
27. ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
|
28. ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
|
29. ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
|
32. ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
|
33. ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
|
34. ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
|
35. ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
|
37. ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
|